ಆ್ಯಪ್ನಗರ

ಗ್ರಾಮೀಣ ಸರಕಾರಿ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್‌

ಮಲೆನಾಡು ಪ್ರದೇಶದ ಸರಕಾರಿ ಶಾಲೆಗಳ ಅಬಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗುವುದೆಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

Vijaya Karnataka 20 Feb 2019, 5:00 am
ಬಾಳೆಹೊನ್ನೂರು: ಮಲೆನಾಡು ಪ್ರದೇಶದ ಸರಕಾರಿ ಶಾಲೆಗಳ ಅಬಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗುವುದೆಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
Vijaya Karnataka Web CKM-19bhr1


ಅವರು ಬಾಳೆಹೊನ್ನುರು ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷ ಣ ಇಲಾಖೆ ವತಿಯಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ ವಿತರಿಸಿ ಮಾತನಾಡಿದರು.

ಮಲೆನಾಡಿನ ಶಾಲೆಗಳ ಬಗ್ಗೆ ವಿಶೇಷ ಗಮನ ಹರಿಸಿ, ಅಭಿವೃದ್ಧಿ ಪಡಿಸಲಾಗುವುದು. ಅಲ್ಲದೆ ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶದ ಎಲ್ಲಾ ಸರಕಾರಿ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್‌ ಪ್ರಾರಂಭಮಾಡುವ ಅವಶ್ಯಕತೆಯಿದೆ. ಬಹಳ ಪ್ರಮುಖವಾಗಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಹಲವಾರು ಉನ್ನತ ಹುದ್ದೆಗಳನ್ನು ಪಡೆದಿದ್ದಾರೆ. ಈ ದೃಷ್ಟಿಯಲ್ಲಿ ವಿದ್ಯಾರ್ಥಿಗಳು ಸರಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಶಿಕ್ಷ ಣವಂತರಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಬಾಳೆಹೊನ್ನೂರು ಸರಕಾರಿ ಪ್ರೌಢಶಾಲೆ ವಿಧ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ 577ಉಚಿತ ಸೈಕಲ್‌ಗಳನ್ನು ವಿತರಿಸಲಾಯಿತು.

ಜಿ.ಪಂ. ಸದಸ್ಯೆ ಚಂದ್ರಮ್ಮ, ತಾ.ಪಂ. ಉಪಾಧ್ಯಕ್ಷ ಮಂಜು ಹೊಳೆಬಾಗಿಲು, ತಾ.ಪಂ. ಸದಸ್ಯ ಟಿ.ಎಂ.ನಾಗೇಶ್‌, ಕ್ಷೇತ್ರ ಶಿಕ್ಷ ಣಾಧಿಕಾರಿ ನಾಗರಾಜ್‌, ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ಎಸ್‌.ಚೆನ್ನಕೇಶವಗೌಡ, ಬಿ.ಕಣಬೂರು ಗ್ರಾ.ಪಂ. ಅಧ್ಯಕ್ಷ ಮಹಮ್ಮದ್‌ ಹನೀಫ್‌, ಗ್ರಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್‌ ಜುಹೇಬ್‌, ಎಂ.ಎಸ್‌.ಅರುಣೇಶ್‌, ಜಾನ್‌ಡಿಸೋಜಾ, ಎಂ.ಪಿ.ಶ್ರೀನಿವಾಸಾಚಾರ್‌, ಪ್ರೌಢಶಾಲೆ ಮುಖ್ಯ ಶಿಕ್ಷ ಕ ಕೊಟ್ರೇಶಪ್ಪ, ಸುರೇಂದ್ರ, ಬಿ.ಸಿ.ಸಂತೋಷ್‌ಕುಮಾರ್‌, ಕೆ.ಕೆ.ರಮೇಶ್‌, ಎಸ್‌.ಜೆ.ಆರ್‌.ಕಾಲೇಜಿನ ಪ್ರಾಂಶುಪಾಲ ಜಾನ್‌ವಿಲ್ಸನ್‌ ಮತ್ತಿತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ