ಆ್ಯಪ್ನಗರ

ಹೃದಯ ವಿದ್ರಾವಕ: ಮಾವನ ಅಂತ್ಯ ಸಂಸ್ಕಾರಕ್ಕೆ ಬಂದ ಅಳಿಯ ಸಾವು

ಮಾವನನ್ನು ಮಣ್ಣು ಮಾಡಿ ಮರಳಿ ಊರಿಗೆ ಹೊರಟಿದ್ದವನು ಮನೆ ಸೇರಲೇ ಇಲ್ಲ.

Vijaya Karnataka Web 1 Oct 2019, 11:39 am
ಚಿಕ್ಕಮಗಳೂರು: ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಳಿಯ ಕೂಡ ಸಾವನ್ನಪ್ಪಿದ ಹೃದಯ ಕಲಕುವ ಘಟನೆ ಕಾಫಿ ನಾಡಲ್ಲಿ ನಡೆದಿದೆ.
Vijaya Karnataka Web Dead Body


ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿಯಲ್ಲಿ ಘಟನೆ ನಡೆದಿದ್ದು, 47 ವರ್ಷದ ಸುರೇಶ್ ಮೃತ ದುರ್ದೈವಿ.

ಅಂತ್ಯ ಸಂಸ್ಕಾರ ಮುಗಿಸಿ ಬಸ್ಸಿಗೆ ಕಾಯುತ್ತಿದ್ದ ಸುರೇಶ್ ಅವರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಬ್ಬರ ಹಿಂದೊಬ್ಬರಂತೆ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವ ಸಂಬಂಧಿಕರ ಗೋಳು ಮುಗಿಲು ಮುಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ