ಆ್ಯಪ್ನಗರ

ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ

ಕ್ರೀಡೆಗಳಲ್ಲಿ ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವುದು ಮುಖ್ಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ಅಭಿಪ್ರಾಯಪಟ್ಟರು.

Vijaya Karnataka 21 Jul 2019, 5:00 am
ಚಿಕ್ಕಮಗಳೂರು : ಕ್ರೀಡೆಗಳಲ್ಲಿ ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವುದು ಮುಖ್ಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ಅಭಿಪ್ರಾಯಪಟ್ಟರು.
Vijaya Karnataka Web sportsmanship is more important than defeat
ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ


ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಿಂದ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಪತ್ರಕರ್ತರಿಗೆ ಆಯೋಜಿಸಿದ್ದ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ ವೈಯಕ್ತಿಕ ಸಾಧನೆಗಳಿಗಿಂತ ತಂಡ ಸಾಧನೆಗಳೇ ಹೆಚ್ಚು. ಎಲ್ಲ ತಂಡಗಳೂ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವಿನ ಬಗ್ಗೆ ಚಿಂತೆ ಮಾಡದೆ ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ಸಲಹೆ ಮಾಡಿದರು.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಡಿಸೆಂಬರ್‌ನಲ್ಲೇ ನೀರಿನ ಅಭಾವ ಉಂಟಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರಾಕೃತಿಕ ಸಂಪತ್ತಿದೆ. ಈ ಜಿಲ್ಲೆಯಲ್ಲಿ ಮಳೆ ಬಂದರೆ ಬೇರೆ ಜಿಲ್ಲೆಗಳಿಗೂ ಅನುಕೂಲವಾಗುತ್ತದೆ. ಇಲ್ಲಿನ ಪ್ರಾಕೃತಿಕ ಸಂಪತ್ತಿನ ರಕ್ಷಣೆ ಎಲ್ಲರ ಜವಾಬ್ದಾರಿ. ಜಿಲ್ಲೆಯಲ್ಲಿ ಬಿಟ್‌ ಕಾಯಿನ್‌ನಂತಹ ವಂಚನೆ ಪ್ರಕರಣ, ಪರಿಸರ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸಲು ಮಾಧ್ಯಮಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ ಅಧ್ಯಕ್ಷ ಆರಗ ರವಿ ಮಾತನಾಡಿದರು. ಪ್ರಧಾನ ಕಾರ‍್ಯದರ್ಶಿ ಎಚ್‌.ಎಸ್‌.ಶಿವಕುಮಾರ್‌, ಉಪಾಧ್ಯಕ್ಷ ಎಸ್‌.ಕೆ.ಲಕ್ಷ್ಮೇಪ್ರಸಾದ್‌, ಖಜಾಂಚಿ ಕೆ.ಎಸ್‌.ಕಿಶೋರ್‌ಕುಮಾರ್‌, ನಿರ್ದೇಶಕರಾದ ಬಿ.ಎಂ.ರವಿ, ಎಂ.ಎಸ್‌.ಉಮೇಶ್‌ಕುಮಾರ್‌, ಚೇತನ್‌ ಬೇಲೇನಹಳ್ಳಿ, ಪುನಿತ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ