ಆ್ಯಪ್ನಗರ

ಚಿಕ್ಕಮಗಳೂರು: ಬೀದಿ ಬದಿ ಪ್ಯಾಪಾರಿಗಳಿಗೆ ₹10 ಸಾವಿರ ಆರ್ಥಿಕ ನೆರವು

ಕೋವಿಡ್‌-19 ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತೆ ವ್ಯಾಪಾರ ಪ್ರಾರಂಭಿಸಲು ಕೇಂದ್ರ ಸರಕಾರ 10 ಸಾವಿರ ರೂಪಾಯಿವರೆಗೆ ಆರ್ಥಿಕ ಸೌಲಭ್ಯ ನೀಡಿದೆ ಎಂದು ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಗಿರಿಗೌಡ ಹೇಳಿದರು.

Vijaya Karnataka Web 21 Jan 2021, 10:33 pm
ಚಿಕ್ಕಮಗಳೂರು: ಕೋವಿಡ್‌-19 ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತೆ ವ್ಯಾಪಾರ ಪ್ರಾರಂಭಿಸಲು ಕೇಂದ್ರ ಸರಕಾರ 10 ಸಾವಿರ ರೂಪಾಯಿವರೆಗೆ ಆರ್ಥಿಕ ಸೌಲಭ್ಯ ನೀಡಿದೆ ಎಂದು ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಗಿರಿಗೌಡ ಹೇಳಿದರು.
Vijaya Karnataka Web street vendors


ನಗರಸಭೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್‌ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೀದಿ ಬದಿ ವ್ಯಾಪಾರಿಗಳು ಡಿಜಿಟಲ್‌ ವಹಿವಾಟಿನಿಂದ 100 ರವರೆಗೆ ಕ್ಯಾಶ್‌ ಬ್ಯಾಕ್‌ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಚಿಕ್ಕಮಗಳೂರಲ್ಲಿ ಮೊದಲ ಲಸಿಕೆ ಪಡೆದ ಡಿ ದರ್ಜೆ ಸಿಬ್ಬಂದಿ ಗುರಮ್ಮ: 9 ಕೇಂದ್ರಗಳಲ್ಲಿ ವ್ಯಾಕ್ಸಿನ್‌

ವ್ಯವಸ್ಥಾಪಕ ಮಂಜುನಾಥ್‌ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ಸಾಲ ಮರುಪಾವತಿ ಜತೆಗೆ ಪರಿಸರ ಸಂರಕ್ಷಣೆ, ಆಹಾರ ಪದಾರ್ಥಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ಅಧಿಕಾರಿಗಳಾದ ಹರ್ಷ, ಶಿವಲಿಂಗಯ್ಯ, ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕಮಗಳೂರಿನಲ್ಲಿ ಮಲಗಿದ್ದ ವ್ಯಕ್ತಿಯ ಮೈ ಮೇಲೆ ಹರಿದಾಡಿದ ಕಾಳಿಂಗ ಸರ್ಪ!

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲೆಂದು ಕೇಂದ್ರ ಸರಕಾರ 'ಆತ್ಮನಿರ್ಭರ ಯೋಜನೆ'ಯಡಿ ಬಡ್ಡಿ ರಹಿತ ಸಾಲ ನೀಡುತ್ತಿದೆ. ರಸ್ತೆ ಬದಿಯಲ್ಲಿ ತಳ್ಳುಬಂಡಿ, ಆಟೊಗಳಲ್ಲಿ ತಿಂಡಿ, ಊಟ ಹಾಗೂ ಪಾನೀಯ ಪದಾರ್ಥಗಳನ್ನು ಮಾರಾಟ ಮಾಡುವವರು ಮತ್ತು ಮನೆಗಳ ಬಳಿ ತೆರಳಿ ತರಕಾರಿ, ಹೂ, ಕಾಯಿ ಮಾರುವವರು ಮತ್ತು ರಸ್ತೆ ಬದಿಯಲ್ಲಿ ಬುಟ್ಟಿ ವ್ಯಾಪಾರಿಗಳು ಈ ಸಾಲ ಸೌಲಭ್ಯ ಪಡೆಯಬಹುದು. ಪಾದರಕ್ಷೆಗಳು, ಚರ್ಮ ಉತ್ಪನ್ನಗಳ ರಿಪೇರಿ ಹಾಗೂ ಮಾರಾಟ ಮಾಡುವವರು ಮತ್ತು ಆಟದ ಸಾಮಾನು, ಇತರೆ ಗೃಹಪಯೋಗಿ ವಸ್ತುಗಳನ್ನು ಮಾರಾಟ ಮಾಡುವವರು ಈ ಯೋಜನೆಗೊಳಪಡುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ