ಆ್ಯಪ್ನಗರ

ವಿದ್ಯಾರ್ಥಿಗಳು ಸಂವಿಧಾನ ಓದಿ, ಅರ್ಥಮಾಡಿಕೊಳ್ಳಿ

ವಿದ್ಯಾರ್ಥಿಗಳು ಸಂವಿಧಾನವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು ಎಂದು ಜಸ್ಟೀಸ್‌ ಎಚ್‌.ಎನ್‌.ನಾಗಮೋಹನದಾಸ್‌ ಹೇಳಿದರು.

Vijaya Karnataka 2 Jul 2019, 6:25 pm
ಚಿಕ್ಕಮಗಳೂರು: ವಿದ್ಯಾರ್ಥಿಗಳು ಸಂವಿಧಾನವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು ಎಂದು ಜಸ್ಟೀಸ್‌ ಎಚ್‌.ಎನ್‌.ನಾಗಮೋಹನದಾಸ್‌ ಹೇಳಿದರು.
Vijaya Karnataka Web CKM-30RUDRAP2


ನಗರದ ಬೇಲೂರು ರಸ್ತೆಯಲ್ಲಿರುವ ಮೆಟ್ರಿಕ್‌ ನಂತರದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ಓದು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದಿಂದ ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮಾನರಾಗಿ ಸೇವೆ ಸಲಿಸುತ್ತಿದ್ದಾರೆ. ಮಹಿಳೆಯರು ರಕ್ಷಣಾ ಸಚಿವರಾಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ , ಉದ್ಯಮಿಯಾಗಿ ಮತ್ತಿತರೆ ಅನೇಕ ಕ್ಷೇತ್ರಗಳಲ್ಲಿ ತನ್ನ ಛಾಪು ಮೂಡಿಸಿದ್ದಾಳೆ ಎಂದರು.

ಸಂವಿಧಾನದಿಂದ ಐಎಎಸ್‌, ಐಪಿಎಸ್‌ ಆಡಳಿತದಲ್ಲಿ ಸೇವೆ ಸಲ್ಲಿಸುವುದರ ಜತೆಗೆ ಸುಪ್ರೀಂ ಕೋರ್ಟ್‌ನಲ್ಲೂ ಮೂರುಜನ ಮಹಿಳೆಯರು ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಸಂವಿಧಾನವನ್ನು ಓದಿದಾಗ ಮಾತ್ರ ಕಾನೂನಿನ ಜ್ಞಾನ ತಿಳಿದುಕೊಂಡು ಬದುಕಿನ ಬೆಳಕನ್ನು ಕಾಣಲು ಸಾಧ್ಯ ಎಂದರು.

ಈ ಸಂದರ್ಭ ಸಂವಿಧಾನ ಓದು ಸಮಿತಿಯ ರಾಜ್ಯ ಸಂಚಾಲಕಿ ಕೆ.ಎಸ್‌.ವಿಮಲಾ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ಚೇಂಗಟ್ಟಿ, ಉಪನ್ಯಾಸಕ ರಾಜಶೇಖರ್‌ಕಿಗ್ಗಾ, ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಹಾಜರಿದ್ದರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಡಿ.ರೇವಣ್ಣ ಸ್ವಾಗತಿಸಿ, ಕಚೇರಿ ವ್ಯವಸ್ಥಾಪಕ ಸೋಮಶೇಖರ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ