ಆ್ಯಪ್ನಗರ

ತುಂಗೆಗೆ ಹಾರಿ ಆಹಾರ ನಿರೀಕ್ಷಕ ಆತ್ಮಹತ್ಯೆ

ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Vijaya Karnataka 8 Dec 2019, 5:00 am
ನರಸಿಂಹರಾಜಪುರ: ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
Vijaya Karnataka Web suicide by food prospector
ತುಂಗೆಗೆ ಹಾರಿ ಆಹಾರ ನಿರೀಕ್ಷಕ ಆತ್ಮಹತ್ಯೆ


ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಕಾಲೋನಿಯಲ್ಲಿವಾಸವಾಗಿದ್ದ ದತ್ತಾತ್ರೇಯ ಅವರು ಇನ್ನು 2 ತಿಂಗಳಲ್ಲಿನಿವೃತ್ತಿಯಾಗಲಿದ್ದರು. ಶನಿವಾರ ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದರು. 10 ಗಂಟೆಯ ಹೊತ್ತಿಗೆ ಪತ್ನಿ ಅನುಸೂಯ ಅವರಿಗೆ ಕರೆ ಮಾಡಿ, ನಾನು ಮುಡುಬ ಸೇತುವೆ ಸಮೀಪದಲ್ಲಿದ್ದು ಅಲ್ಲಿಗೆ ಬರುವಂತೆ ತಿಳಿಸಿದ್ದಾರೆ. ಪತ್ನಿ ಹಾಗೂ ಮಕ್ಕಳು ಮುಡುಬ ಸೇತುವೆ ಸಮೀಪ ಬಂದು ಹುಡುಕಿದಾಗ ತುಂಗಾ ನದಿ ದಡದಲ್ಲಿದತ್ತಾತ್ರೇಯ ಅವರ ಮೃತ ದೇಹ ಸಿಕ್ಕಿದೆ.

ದತ್ತಾತ್ರೇಯ ಅವರ ಪತ್ನಿ ಅನುಸೂಯ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ಹೊಸನಗರ ತಹಸೀಲ್ದಾರ್‌ ಮತ್ತು ಇತರರು ತಮ್ಮ ಪತಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಈಗಾಗಲೇ ಎಸ್‌ಸಿ ಹಾಗೂ ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಹಕ್ಕುಪತ್ರ ತಿದ್ದುಪಡಿ ವಿಚಾರದಲ್ಲಿತಮ್ಮ ಪತಿಯ ಮೇಲೆ ಕೇಸು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ನರಸಿಂಹರಾಜಪುರ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ