ಆ್ಯಪ್ನಗರ

ರಕ್ತದಾನದಿಂದ ಜೀವದ ಉಳಿವು

ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭಗಳಲ್ಲಿ ಜೀವಗಳನ್ನು ಉಳಿಸಬಹುದು ಎಂದು ವೈದ್ಯೆ ಡಾ.ಶಮಿತಾ ಹೇಳಿದರು.

Vijaya Karnataka 17 Jul 2019, 6:26 pm
ಚಿಕ್ಕಮಗಳೂರು : ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭಗಳಲ್ಲಿ ಜೀವಗಳನ್ನು ಉಳಿಸಬಹುದು ಎಂದು ವೈದ್ಯೆ ಡಾ.ಶಮಿತಾ ಹೇಳಿದರು.
Vijaya Karnataka Web CKM-16SHIVUP4


ಅಕ್ಕಮಹಾದೇವಿ ಮಹಿಳಾ ಸಂಘದ 11ನೇ ವಾರ್ಷಿಕೋತ್ಸವ ಅಂಗವಾಗಿ ಹೋಲಿಕ್ರಾಸ್‌ ಆಸ್ಪತ್ರೆ ಸಹಯೋಗದಲ್ಲಿ ರೇಣುಕಾಚಾರ‍್ಯ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಮನುಷ್ಯನ ದೇಹದಲ್ಲಿ ಉತ್ಪತ್ತಿಯಾಗುವ ರಕ್ತಕ್ಕೆ ಸರಿಸಾಟಿ ಮತ್ತೊಂದಿಲ್ಲ. ವಿಜ್ಞಾನ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೃತಕ ರಕ್ತ ತಯಾರಿಕೆ ಸಾಧ್ಯವಾಗಿಲ್ಲ. ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ. ಪ್ರತಿ 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಗೌರಮ್ಮಬಸವೇಗೌಡ ಮಾತನಾಡಿ, ಎಲ್ಲ ಸಿರಿ ಸಂಪತ್ತಿಗಿಂತ ದೇಹದ ಆರೋಗ್ಯವೇ ಮುಖ್ಯ. ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗುವ ಪರಿಪಾಠ ಬೆಳೆಸಿಕೊಳ್ಳಬೇಕು. ಮಹಿಳೆಯರು ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ಉಪಾಧ್ಯಕ್ಷೆ ಕಾತ್ಯಾಯಿನಿಚಂದ್ರಶೇಖರ್‌, ಕಾರ‍್ಯದರ್ಶಿ ರೇಖಾಉಮಾಶಂಕರ್‌, ಖಜಾಂಚಿ ಯಮುನಾ ಸಿ.ಶೆಟ್ಟಿ, ನಾಗಮಣಿ, ಪಾರ್ವತಿ, ಭಾಗ್ಯಮಹೇಶ್‌ ಹಾಜರಿದ್ದರು. ಡಾ.ವಿನಯ್‌, ಡಾ.ಶಮಿತಾ ನೇತೃತ್ವದಲ್ಲಿ 172 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಸಹ ಕಾರ‍್ಯದರ್ಶಿ ಭಾರತಿಶಿವರುದ್ರಪ್ಪ ಸ್ವಾಗತಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ