ಆ್ಯಪ್ನಗರ

ತಾ. ಪಂ. ಅಧ್ಯಕ್ಷ ರಿಂದ ಧಿಡೀರ್‌ ಹಾಸ್ಟೆಲ್‌ ಭೇಟಿ

ಪಟ್ಟಣದ ಕೆ.ಎಂ.ರಸ್ತೆಯಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ತಾ.ಪಂ. ಅಧ್ಯಕ್ಷ ಕೆ.ಸಿ.ರತನ್‌ ಮತ್ತು ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.

Vijaya Karnataka 30 Sep 2018, 5:00 am
ಮೂಡಿಗೆರೆ : ಪಟ್ಟಣದ ಕೆ.ಎಂ.ರಸ್ತೆಯಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ತಾ.ಪಂ. ಅಧ್ಯಕ್ಷ ಕೆ.ಸಿ.ರತನ್‌ ಮತ್ತು ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.
Vijaya Karnataka Web CKM-29MDG-P2


ಈ ವೇಳೆ ಕುಡಿಯುವ ನೀರು, ಬಿಸಿ ನೀರು, ರುಚಿಯಿಲ್ಲದ ಅಡುಗೆ, ಕೆಲ ಸಿಬ್ಬಂದಿಗಳ ನ್ಯೂನತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳು ಅಧ್ಯಕ್ಷ ರ ಗಮನಕ್ಕೆ ತಂದರು. ವಿದ್ಯಾರ್ಥಿ ನಿಲಯದಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳೇ ಹೆಚ್ಚಾಗಿ ಇರುವುದರಿಂದ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಸಿಬ್ಬಂದಿಗಳು ರಾತ್ರಿ 8-45 ರವರೆಗೂ ವಿದ್ಯಾರ್ಥಿ ನಿಲಯದಲ್ಲಿರಬೇಕು. ಕುಡಿಯಲು ಶುದ್ಧನೀರನ್ನು ಒದಗಿಸಬೇಕು, ರುಚಿ ಮತ್ತು ಶುಚಿತ್ವವನ್ನು ಕಾಪಾಡಲು ಅಡುಗೆಯವರು ಎಚ್ಚರ ವಹಿಸಬೇಕು. ಇಲ್ಲದಿದ್ದಲ್ಲಿ ಕೂಡಲೇ ಅಡುಗೆಯವರನ್ನು ಕೆಲಸದಿಂದ ಕೈಬಿಡಬೇಕು. ಮುಂದಿನ ದಿನದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರ ವಹಿಸಬೇಕು ಎಂದು ಸಮಾಜ ಕಲ್ಯಾಣ ಅಧಿಕಾರಿಗೆ ಸೂಚಿಸಿದರು.ಈ ವೇಳೆ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಡಿ.ಡಿ.ಪ್ರಕಾಶ್‌, ಸಮಾಜ ಕಲ್ಯಾಣಾಧಿಕಾರಿ ಧನಂಜಯ್‌ ಇದ್ದರು.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ