ಆ್ಯಪ್ನಗರ

ಮತದಾನಕ್ಕೆ ಗ್ರಾಮಸ್ಥರ ಮನವೊಲಿಸಿದ ತಹಸೀಲ್ದಾರ್‌

ಮುಂಬರುವ ಲೋಕಸಭೆ ಚುನಾವಣೆ ಮತ್ತು ಪುರಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದ ಉಪ್ಪಾರ ಬಸವನಹಳ್ಳಿ ಗ್ರಾಮಕ್ಕೆ ಶನಿವಾರ ಸಂಜೆ ತಹಸೀಲ್ದಾರ್‌ ಎನ್‌.ಟಿ.ಧರ್ಮೋಜಿರಾವ್‌ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಅವರ ಮನವೊಲಿಸಿದರು.

Vijaya Karnataka 26 Mar 2019, 5:00 am
ತರೀಕೆರೆ: ಮುಂಬರುವ ಲೋಕಸಭೆ ಚುನಾವಣೆ ಮತ್ತು ಪುರಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದ ಉಪ್ಪಾರ ಬಸವನಹಳ್ಳಿ ಗ್ರಾಮಕ್ಕೆ ಶನಿವಾರ ಸಂಜೆ ತಹಸೀಲ್ದಾರ್‌ ಎನ್‌.ಟಿ.ಧರ್ಮೋಜಿರಾವ್‌ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಅವರ ಮನವೊಲಿಸಿದರು.
Vijaya Karnataka Web ckm-25tkr2


ಚುನಾವಣೆಯನ್ನು ಬಹಿಷ್ಕರಿಸಲು ಕಾರಣಗಳೇನು ಎಂದು ಗ್ರಾಮಸ್ಥರಿಂದ ಮಾಹಿತಿ ಪಡೆದ ತಹಸೀಲ್ದಾರ್‌, ಅವರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳವುದಾಗಿ ತಿಳಿಸಿದರು. ಮತದಾನವನ್ನು ಬಹಿಷ್ಕರಿಸಬಾರದು, ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

ಗ್ರಾಮಸ್ಥರ ಎದುರಿನಲ್ಲಿಯೇ ಜಿಲ್ಲಾಧಿಕಾರಿ ಬಗಾದಿಗೌತಮ್‌ರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಗ್ರಾಮಸ್ಥರ ಅಹವಾಲನ್ನು ತಿಳಿಸಿ ಅವರ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಮಾಹಿತಿ ನೀಡಿದರು.

ಗ್ರಾಮಸ್ಥರ ಮನವಿಯಂತೆ ಉಪ್ಪಾರ ಬಸವನಹಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಿಕೊಡಲು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಸಂವಿಧಾನ ಬದ್ಧವಾಗಿ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಳೆದು ಕೊಳ್ಳಬಾರದು. ತಹಸೀಲ್ದಾರ್‌ ಅವರ ಮಾತಿಗೆ ಸ್ಪಂದಿಸಿದ ಗ್ರಾಮಸ್ಥರು ಬರಲಿರುವ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಪೊಲೀಸ್‌ ಇನ್ಸ್‌ಪೆಕ್ಟರ್‌ ಜಯಂತ್‌.ಎಲ್‌.ಗೌಳಿ, ರಾಜಸ್ವ ನಿರೀಕ್ಷ ಕ ಆನಂತರಾಮ್‌ನಾಯ್ಕ್‌, ಗ್ರಾಮ ಲೆಕ್ಕಾಧಿಕಾರಿ ರೇವಣ್ಣ, ಗ್ರಾಮಸ್ಥರಾದ ಸಿದ್ಧಾರೂಢ, ಕುಮಾರಪ್ಪ, ಸಿದ್ದಪ್ಪ, ಅಣ್ಣಪ್ಪ, ಶಿವಲಿಂಗಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ