ಆ್ಯಪ್ನಗರ

ರೈತರಿಗೆ ಸೌಲಭ್ಯ ಒದಗಿಸಲು ಮುತುವರ್ಜಿ ವಹಿಸಿ

ಕೇಂದ್ರ ಸರಕಾರ ರೈತರ ಉಪಯೋಗಕ್ಕಾಗಿ ಮಣ್ಣು ಪರೀಕ್ಷೆ ನಡೆಸುವ ಮಹತ್ತರ ಕಾರ್ಯ ಕೈಗೊಂಡಿದೆ ಎಂದು ಸಂಸದೆ ಶೋಭ ಕರಂದ್ಲಾಜೆ ತಿಳಿಸಿದರು.

Vijaya Karnataka 24 Feb 2019, 5:00 am
ತರೀಕೆರೆ ಗ್ರಾಮಾಂತರ : ಕೇಂದ್ರ ಸರಕಾರ ರೈತರ ಉಪಯೋಗಕ್ಕಾಗಿ ಮಣ್ಣು ಪರೀಕ್ಷೆ ನಡೆಸುವ ಮಹತ್ತರ ಕಾರ್ಯ ಕೈಗೊಂಡಿದೆ ಎಂದು ಸಂಸದೆ ಶೋಭ ಕರಂದ್ಲಾಜೆ ತಿಳಿಸಿದರು.
Vijaya Karnataka Web CKM-23sid2


ಅವರು ಅಮೃತಾಪುರ ಹೋಬಳಿಯ ಹುಣಸಘಟ್ಟ ಗ್ರಾಮದಲ್ಲಿ ಸುಮಾರು 41 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ರೈತ ಸಂಪರ್ಕ ಕೇಂದ್ರ ಕಟ್ಟಡದ ಗುದ್ದಲಿಪೂಜೆ ನಿಮಿತ್ತ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಣ್ಣು ಪರೀಕ್ಷೆಯಿಂದ ಮಣ್ಣಿನ ಗುಣಮಟ್ಟಕ್ಕೆ ಸರಿಹೊಂದುವ ಬೆಳೆ ಬೆಳೆಯಲು ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ 5 ಎಕರೆ ಜಮೀನಿಗಿಂತ ಕಡಿಮೆ ಇರುವ ರೈತರ ಖಾತೆಗೆ ನೇರವಾಗಿ 6 ಸಾವಿರ ರೂ. ಜಮೆ ಮಾಡಲಾಗುವುದು. ರೈತರಿಗೆ ದೊರಕಬೇಕಿರುವ ಸೌಲಭ್ಯಗಳನ್ನು ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಲುಪಿಸಬೇಕು ಎಂದರು.

ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳಿದ್ದರೆ ರೈತರಿಗೆ ಬೇಕಾದ ಸೌಲಭ್ಯಗಳು, ಸಲಹೆ ದೊರಕಲು ಸಾಧ್ಯ. ತಾಲೂಕಿನ ಲಕ್ಕವಳ್ಳಿ, ಅಮೃತಾಪುರದಲ್ಲಿ ನೂತನ ಕಟ್ಟಡಗಳಿಗೆ ಅನುದಾನ ಬಿಡುಗಡೆಯಾಗಿದೆ ಎಂದರು.

ಜಿ.ಪಂ. ಉಪಾಧ್ಯಕ್ಷ ಕೆ.ಆರ್‌.ಆನಂದಪ್ಪ, ತಾ.ಪಂ. ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌, ಉಪಾಧ್ಯಕ್ಷೆ ಮಂಜುಳ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್‌ಕುಮಾರ್‌, ಹುಣಸಘಟ್ಟ ಗ್ರಾ.ಪಂ. ಅಧ್ಯಕ್ಷ ಮಂಜಾನಾಯ್ಕ, ಹಾದೀಕೆರೆ ಗ್ರಾ.ಪಂ. ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಸದಸ್ಯ ಸುಧಾಕರ್‌, ಗ್ರಾ.ಪಂ. ಮಾಜಿ ಅಧ್ಯಕ್ಷ ತಿಪ್ಪೇಶಪ್ಪ, ಡಿ.ಬಿ.ಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್‌, ಎಪಿಎಂಸಿ ನಿರ್ದೇಶಕ ಕುಮಾರ್‌, ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಎ.ಆರ್‌.ರಾಜಶೇಖರ್‌, ತಾ.ಪಂ. ಇಒ ವಿಶಾಲಾಕ್ಷಮ್ಮ, ಸಹಾಯಕ ಕೃಷಿ ನಿರ್ದೇಶಕ ಟಿ.ಎನ್‌.ಚಿತ್ರಸೇನ, ಕೃಷಿ ಅಧಿಕಾರಿಗಳಾದ ಮಹೇಶ್‌, ಬಾಬಣ್ಣನವರ್‌, ಅನುವುಗಾರ ಸತೀಶ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ