ಆ್ಯಪ್ನಗರ

ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ

ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸ್ಪರ್ಧಾಳು ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ತಹಸೀಲ್ದಾರ್‌ ಗೋಪಿನಾಥ್‌ ಹೇಳಿದರು.

Vijaya Karnataka 18 Dec 2018, 9:46 pm
ನರಸಿಂಹರಾಜಪುರ : ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸ್ಪರ್ಧಾಳು ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ತಹಸೀಲ್ದಾರ್‌ ಗೋಪಿನಾಥ್‌ ಹೇಳಿದರು.
Vijaya Karnataka Web CKM-17nrp1


ಪಟ್ಟಣದ ಕುವೆಂಪು ಕ್ರೀಡಾಂಗಣದಲ್ಲಿ ತಾಲೂಕು ಸರಕಾರಿ ನೌಕರರ ಸಂಘ ಶನಿವಾರ ಆಯೋಜಿಸಿದ್ದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷ ಣಾಧಿಕಾರಿ ಪಿ.ನಾಗರಾಜ್‌ ಮಾತನಾಡಿ, ಸರಕಾರಿ ನೌಕರರು ಪ್ರತಿ ನಿತ್ಯ ಕೆಲಸದ ಒತ್ತಡದಲ್ಲಿರುವುದರಿಂದ ಅವರಿಗೂ ಒಂದು ದಿನ ಬದಲಾವಣೆ ಇರಲಿ ಎಂಬ ಉದ್ದೇಶದಿಂದ ಸರಕಾರಿ ನೌಕರರ ಸಂಘವು ಕ್ರೀಡಾ ಕೂಟ ಏರ್ಪಡಿಸಿ ಗೆದ್ದವರಿಗೆ ಬಹುಮಾನ ವಿತರಿಸುತ್ತಿದೆ. ಆದರೆ, ಸರಕಾರಿ ನೌಕರರು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮುಂದಿನ ವರ್ಷದಲ್ಲಾದರೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯ ಅಧ್ಯಕ್ಷ ತೆಯನ್ನು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್‌ ವಹಿಸಿದ್ದರು. ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿ ಲೋಕೇಶ್‌, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಾಕೋಸ್‌, ಬಿಸಿಯೂಟ ಯೋಜನೆ ನಿರ್ದೇಶಕ ಧನಂಜಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಅಧ್ಯಕ್ಷ ನಂಜುಂಡಪ್ಪ, ತಾಲೂಕು ಸರಕಾರಿ ನೌಕರರ ಸಂಘದ ಖಜಾಂಚಿ ಕೃಷ್ಣನಾಯಕ್‌, ರಾಜ್ಯ ಪರಿಷತ್‌ ಸದಸ್ಯ ಸಿ.ಕೆ.ಪ್ರಸನ್ನ, ಕಾರ್ಯದರ್ಶಿ ಲೋಹಿತ್‌, ನಿದೇಶಕರಾದ ಕೆ.ಎಂ.ಕೃಷ್ಣಮೂರ್ತಿ, ಅಮೃತ್‌, ವಿಜಯಕುಮಾರ್‌ ಉಪಸ್ಥಿತರಿದ್ದರು.

ಕುವೆಂಪು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್‌, ಗುಂಪು ಸ್ಪರ್ಧೆಗಳು ನಡೆದವು. ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್‌, ಟೇಬಲ್‌ ಟೆನಿಸ್‌, ಷಟಲ್‌ ಬ್ಯಾಡ್ಮಿಟನ್‌ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಗುರುಭವನದಲ್ಲಿ ನಡೆದವು. ನೂರಾರು ಸರಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ