ಆ್ಯಪ್ನಗರ

ಮುಳ್ಳಯ್ಯನಗಿರಿಯಲ್ಲಿ ಕಡಿಮೆ ಮೊತ್ತಕ್ಕೆ ಟೆಂಡರ್‌: ಆರೋಪ

ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ವಾಹನ ನಿಲುಗಡೆ ಟೆಂಡರ್‌ನ್ನು ಅತ್ಯಂತ ಕಡಿಮೆ ಮೊತ್ತಕ್ಕೆ ಅಲ್ಲಂಪುರ ಗ್ರಾಮ ಪಂಚಾಯಿತಿ ನೀಡಿದೆ ಎಂದು ಸಾರ್ವಜನಿಕರು ದೂರಿದ್ದಾರೆ

Vijaya Karnataka 11 Jul 2019, 5:00 am
ವಿಕ ಸುದ್ದಿಲೋಕ ಚಿಕ್ಕಮಗಳೂರು
Vijaya Karnataka Web tender for lower amount in mullaiyanagiri accused
ಮುಳ್ಳಯ್ಯನಗಿರಿಯಲ್ಲಿ ಕಡಿಮೆ ಮೊತ್ತಕ್ಕೆ ಟೆಂಡರ್‌: ಆರೋಪ


ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ವಾಹನ ನಿಲುಗಡೆ ಟೆಂಡರ್‌ನ್ನು ಅತ್ಯಂತ ಕಡಿಮೆ ಮೊತ್ತಕ್ಕೆ ಅಲ್ಲಂಪುರ ಗ್ರಾಮ ಪಂಚಾಯಿತಿ ನೀಡಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮುಳ್ಳಯ್ಯನಗಿರಿಗೆ ವಾರಾಂತ್ಯದಲ್ಲಿ ದಿನಕ್ಕೆ ಸಾವಿರಕ್ಕಿಂತ ಹೆಚ್ಚು ವಾಹನಗಳು ಬರುತ್ತವೆ. ಮುಳ್ಳಯ್ಯನಗಿರಿಯಿಂದ ಬಾಬಾಬುಡನ್‌ಗಿರಿ ಶ್ರೇಣಿಯ ಹಲವು ಪ್ರೇಕ್ಷಣೀಯ ಸ್ಥಳಗಳಿಗೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಕೇವಲ 2.05 ಲಕ್ಷ ರೂ.ಗಳಿಗೆ ಟೆಂಡರ್‌ಗೆ ಒಪ್ಪಿಗೆ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.

4 ಚಕ್ರವಾಹನಕ್ಕೆ 50ರೂ., ದ್ವಿಚಕ್ರ ವಾಹನಕ್ಕೆ 20ರೂ., ಟ್ಯಾಕ್ಸಿಗಳಿಗೆ 80ರೂ., ಮಿನಿ ಬಸ್‌ಗೆ 100ರೂ. ನಿಗದಿಸಲಾಗಿದೆ. ನಾಲ್ಕುಚಕ್ರದ ವಾಹನಗಳು ದಿನವೊಂದಕ್ಕೆ 500 ಬಂದರೂ 25ಸಾವಿರ ರೂ. ಸಂಗ್ರಹವಾಗುತ್ತದೆ. 2 ದಿನಕ್ಕೆ 50 ಸಾವಿರ ರೂ. ಸಂಗ್ರಹವಾಗುತ್ತದೆ. ಆದರೆ, 9 ತಿಂಗಳಿಗೆ ಗ್ರಾಮ ಪಂಚಾಯಿತಿ ಕೇವಲ 2.05 ಲಕ್ಷ ರೂ.ಗಳಿಗೆ ಟೆಂಡರ್‌ ನೀಡಿದೆ ಎಂದು ಹೇಳಿದ್ದಾರೆ.

ಟೆಂಡರ್‌ ನೀಡುವಾಗ ಪಿಡಿಒ ಯಾವುದೋ ಒತ್ತಡಕ್ಕೆ ಮಣಿದಿರುವ ಸಾಧ್ಯತೆ ಇದೆ. ವಾರಾಂತ್ಯ ಮಾತ್ರವಲ್ಲದೆ ಪ್ರತಿದಿನವೂ ಇಲ್ಲಿಗೆ ನೂರಾರು ಪ್ರವಾಸಿಗರು ವಾಹನಗಳಲ್ಲಿ ಆಗಮಿಸುತ್ತಾರೆ. ಪಂಚಾಯಿತಿಗೆ ಹೆಚ್ಚಿನ ಆದಾಯ ಗಳಿಸುವ ಬಗ್ಗೆ ಚಿಂತನೆ ಮಾಡದೆ ಯಾರಿಗೋ ಲಾಭವಾಗುವಂತೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದೆ. ಜಿ.ಪಂ. ಮುಖ್ಯ ಕಾರ‍್ಯ ನಿರ್ವಹಣಾಧಿಕಾರಿಗಳು ತಕ್ಷಣ ಈ ಟೆಂಡರ್‌ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಾಹನ ನಿಲುಗಡೆಗೆ ನಿಗದಿಸಿರುವ ಜಾಗದಲ್ಲಿ ಪ್ಲಾಸ್ಟಿಕ್‌ ಸೇರಿದಂತೆ ಯಾವುದೇ ರೀತಿಯ ತ್ಯಾಜ್ಯ ಹಾಕದಂತೆ ಕ್ರಮ ಕೈಗೊಳ್ಳಬೇಕು. ಅಲ್ಲಿ ಬೀಳುವ ಪ್ಲಾಸ್ಟಿಕ್‌ ಮತ್ತಿತರ ಕಸವನ್ನು ಅಂದೇ ಸಂಗ್ರಹಿಸಿ ತಂದು ವೈಜ್ಞಾನಿಕ ವಿಲೇವಾರಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ