ಆ್ಯಪ್ನಗರ

ಮತಪಟ್ಟಿ ಪರಿಷ್ಕರಣೆ,ರಾಜಕೀಯ ಪಕ್ಷ ಗಳ ಹೊಣೆಗಾರಿಕೆ ಹೆಚ್ಚು

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಜವಾಬ್ದಾರಿಯೂ ಹೆಚ್ಚಿದೆ ಎಂದು ಮತದಾರರ ಪಟ್ಟಿ ವೀಕ್ಷಕಿ ಹಾಗೂ ಸಿಬ್ಬಂದಿ ,ಆಡಳಿತ ಸುಧಾರಣಾ ಇಲಾಖೆ ಅಪರ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಹೇಳಿದರು.

Vijaya Karnataka 15 Nov 2018, 5:00 am
ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಜವಾಬ್ದಾರಿಯೂ ಹೆಚ್ಚಿದೆ ಎಂದು ಮತದಾರರ ಪಟ್ಟಿ ವೀಕ್ಷಕಿ ಹಾಗೂ ಸಿಬ್ಬಂದಿ ,ಆಡಳಿತ ಸುಧಾರಣಾ ಇಲಾಖೆ ಅಪರ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಹೇಳಿದರು.
Vijaya Karnataka Web the ballot revision the responsibility of the political parties
ಮತಪಟ್ಟಿ ಪರಿಷ್ಕರಣೆ,ರಾಜಕೀಯ ಪಕ್ಷ ಗಳ ಹೊಣೆಗಾರಿಕೆ ಹೆಚ್ಚು


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಬುಧವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆರೋಗ್ಯಕರ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲ ಪಕ್ಷ ಗಳ ಹೊಣೆಗಾರಿಕೆ ಮುಖ್ಯವಾಗಿದೆ. ಮತದಾರರ ಪಟ್ಟಿ ಪಾರದರ್ಶಕವಾಗಿ ಪರಿಷ್ಕರಣೆಯಾಗಬೇಕು. ಯಾವುದೇ ಅರ್ಹ ಮತದಾರರು ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು. ಮರಣ ಹೊಂದಿರುವವರು ಹಾಗೂ ಬೇರೆ ಕಡೆ 6 ತಿಂಗಳಿಗಿಂತ ಹೆಚ್ಚಿಗೆ ವಲಸೆ ಹೋಗಿರುವವರ ಹೆಸರನ್ನು ಗುರುತಿಸಿ ಕಡ್ಡಾಯವಾಗಿ ಪಟ್ಟಿಯಿಂದ ಕೈ ಬಿಡಬೇಕು ಎಂದು ನಿರ್ದೇಶನ ನೀಡಿದರು.

ಬೂತ್‌ ಮಟ್ಟದ ಅಧಿಕಾರಿಗಳ ಕಾರ್ಯನಿರ್ವಹಣೆಯ ಬಗ್ಗೆ ಮೇಲಾಧಿಕಾರಿಗಳು ನಿಗಾ ವಹಿಸಿಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಎಂಬುದು ನಿರಂತರ ಪ್ರಕ್ರಿಯೆ. ಆದರೂ ವಿಶೇಷ ಪರಿಷ್ಕರಣೆ ಆಂದೋಲನದ ರೂಪದಲ್ಲಿ ನಡೆಸುವ ಸಂದರ್ಭ ಹೆಚ್ಚು ಕ್ರಿಯಾತ್ಮಕ ಹಾಗೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಯುವ ಸಮುದಾಯದ ಸಹಭಾಗಿತ್ವ ಹಾಗೂ ಸೇರ್ಪಡೆ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಶಿವಕುಮಾರ್‌, ತಹಸೀಲ್ದಾರ್‌ಗಳು ಹಾಗೂ ವಿವಿಧ ರಾಜಕೀಯ ಪಕ್ಷ ಗಳ ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ