ಆ್ಯಪ್ನಗರ

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಖಚಿತ

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವುದು ಖಚಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Vijaya Karnataka 27 May 2019, 5:00 am
ಕೊಪ್ಪ : ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವುದು ಖಚಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web CKM-26KPH6


ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಭಾನುವಾರ ಆಯೋಜಿಸಿದ್ದ ಪ.ಪಂ.ಅಭ್ಯರ್ಥಿ ಪರ ಮತಯಾಚನೆ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯ ಸರಕಾರ ಅಲುಗಾಡುತ್ತಿದೆ. ಅವರ ನಾಯಕರೆ ಸರಕಾರದ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕಳೆದ 1 ವರ್ಷದಲ್ಲಿ ಸರಕಾರ ಎಲ್ಲಿದೆ ಎಂಬುದು ತಿಳಿಯುತ್ತಿಲ್ಲ.ಅಧಿಕಾರಿ ಸಭೆಯಿಲ್ಲ. ಅವರು ಕಮಿಷನ್‌ ದಂಧೆ, ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಿ ನೋಡಿದರೂ ಕಳಪೆ ಕಾಮಗಾರಿಯಾಗುತ್ತಿದೆ. ಕೇಂದ್ರದ ಅನುದಾನದ ಸಮರ್ಪಕ ಬಳಕೆಯಾಗುತ್ತಿಲ್ಲ. ಅವರ ಅಧಿಕಾರ ದುರುಪಯೋಗ, ಬಾಹುಬಲ ಮೆಟ್ಟಿ ನಿಂತು ಮತ ಹಾಕಿ ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆಗಳು. ಬದಲಾವಣೆ ಗಾಳಿ ಬೀಸುತ್ತಿದೆ. ಕೇಂದ್ರದ ಅನುದಾನದ ಸದ್ಬಳಕೆಗಾಗಿ, ಪ.ಪಂ.ಯಲ್ಲಿ 11 ವಾರ್ಡನ ಪಕ್ಷ ದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಅವರು ಮನವಿ ಮಾಡಿದರು. ಮಾಜಿ ಸಚಿವ ಡಿ.ಎನ್‌.ಜೀವರಾಜ್‌, ಜಿ.ಪಂ.ಸದಸ್ಯ ಎಸ್‌.ಎನ್‌.ರಾಮಸ್ವಾಮಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ