ಆ್ಯಪ್ನಗರ

ಬಿಜೆಪಿಯವ್ರು ನನಗೂ ಆಮಿಷ ವೊಡ್ಡಿದ್ರು: ರಾಜೇಗೌಡ

ಬಿಜೆಪಿಯವರು ಆಪರೇಷನ್‌ ಕಮಲಕ್ಕೆ ನನ್ನನ್ನೂ ಒಳಪಡಿಸುವ ಪ್ರಯತ್ನ ಮಾಡಿದ್ದರು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

Vijaya Karnataka 18 Sep 2018, 5:00 am
ಚಿಕ್ಕಮಗಳೂರು : ಬಿಜೆಪಿಯವರು ಆಪರೇಷನ್‌ ಕಮಲಕ್ಕೆ ನನ್ನನ್ನೂ ಒಳಪಡಿಸುವ ಪ್ರಯತ್ನ ಮಾಡಿದ್ದರು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.
Vijaya Karnataka Web t.d.rajegowda


ನರಸಿಂಹರಾಜಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಪ್ರಮುಖ ಮುಖಂಡರು ಹಲವು ಬಾರಿ ನನ್ನನ್ನು ಸಂಪರ್ಕಿಸಿದ್ದರು. ಚುನಾವಣೆ ಮುಗಿದ ತಕ್ಷಣ ಹಾಗೂ ಇತ್ತೀಚೆಗೆ ಕೂಡ ನನ್ನನ್ನು ಆಪರೇಷನ್‌ ಕಮಲಕ್ಕೆ ಒಳಪಡಿಸುವ ಪ್ರಯತ್ನ ಮಾಡಿದರು ಎಂದರು.

ಒಕ್ಕಲಿಗರ ಸಮುದಾಯದ ಮುಖಂಡರ ಮೂಲಕವೂ ನನ್ನನ್ನು ಬಿಜೆಪಿಗೆ ಸೆಳೆಯಲು ಸಂಪರ್ಕ ನಡೆಸಲಾಗಿತ್ತು. ತಮ್ಮನ್ನು ತಾವು ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಬಿಜೆಪಿಯವರು ನನಗೆ ದೊಡ್ಡ ಮಟ್ಟದ ಆಮಿಷವೊಡ್ಡಿದ್ದರು. ನನ್ನನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದರೂ ನಾನು ಆಪರೇಷನ್‌ ಕಮಲಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟವಾಗಿ ಅವರ ಆಮಿಷವನ್ನು ನಿರಾಕರಿಸಿದ್ದೇನೆ. ನಾನು ಕಾಂಗ್ರೆಸ್‌ ಪಕ್ಷ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ರಾಜೇಗೌಡ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ