ಆ್ಯಪ್ನಗರ

ಶಾಸಕರ ವಿರುದ್ಧ ಅವಹೇಳನಕಾರಿ ಭಾಷಣಕ್ಕೆ ಖಂಡನೆ

ಇತ್ತೀಚೆಗೆ ಸಿಪಿಐ ಮುಖಂಡರು ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವುದನ್ನು ಖಂಡಿಸಿ ನಾಗರೀಕ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಟ್ಟಣದ ಲಯನ್ಸ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 19 Mar 2019, 5:00 am
ಮೂಡಿಗೆರೆ : ಇತ್ತೀಚೆಗೆ ಸಿಪಿಐ ಮುಖಂಡರು ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವುದನ್ನು ಖಂಡಿಸಿ ನಾಗರೀಕ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಟ್ಟಣದ ಲಯನ್ಸ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web CKM-18mdg-p1


ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಸಿಪಿಐ ಮುಖಂಡರು ದಲಿತ ಶಾಸಕರ ತೇಜೋವಧೆ ಮಾಡಿರುವುದು ಖಂಡನೀಯ. ಶಾಸಕ ಎಂ.ಪಿ.ಕುಮಾರಸ್ವಾಮಿ ಜಮೀನಿಗೆ ತೆರಳಿದ ಅವರ ಸಂಗಡಿಗರ ವಿರುದ್ಧ ಅಟ್ರಾಸಿಟಿ ಮತ್ತು ಅತಿಕ್ರಮಣ ಪ್ರವೇಶ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಕೂಲಂಕಶ ತನಿಖೆ ಮಾಡಿ ಕೇಸು ದಾಖಲಿಸಬೇಕು. ಇಲ್ಲವಾದರೆ ಪೊಲೀಸ್‌ ಠಾಣೆ ಮುಂದೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಮಾತನಾಡಿ, ಪ್ರತಿಭಟನೆ ಮಾಡುವುದು ತಪ್ಪಲ್ಲ. ಆದರೆ ಪ್ರತಿಭಟನೆ ಹೆಸರಿನಲ್ಲಿ ಶಾಸಕರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವುದು ಸರಿಯಲ್ಲ. ಶಾಸಕರ ಜೊತೆ ಹೋಗಿದ್ದ 14ಮಂದಿಯ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಕಾನೂನನ್ನು ದುರುಪಯೋಗ ಪಡಿಸಿಕೊಂಡಿರುವುದು ಸರಿಯಲ್ಲ. ಇದು ಶಾಸಕರನ್ನು ವೀಕ್‌ ಮಾಡುವ ತಂತ್ರವಾಗಿದೆ ಎಂದು ಹೇಳಿದರು.

ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ದಲಿತರು ಜಮೀನನ್ನು ಹೊಂದಬಾರದೆಂಬ ದೃಷ್ಠಿಯಿಂದ ಸಿಪಿಐ ಮುಂಖಡರು ಬಣ್ಣ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿಪಿಐ ಮುಖಂಡರೊಬ್ಬರು ಮೇಕನಗದ್ದೆಯಲ್ಲಿ ನನ್ನ ಅಜ್ಜನ ಪಿತ್ರಾರ್ಜಿತ 2 ಎಕರೆ ಭೂಮಿಯನ್ನು ತನ್ನ ತೋಟದಲ್ಲಿ ಸೇರಿಸಿಕೊಂಡಿದ್ದಾರೆ. ಇದೂವರೆಗೂ ಅದನ್ನು ಬಿಟ್ಟುಕೊಟ್ಟಿಲ್ಲ. ಮತ್ತೊಬ್ಬ ಮುಖಂಡರು ಹಂಡುಗುಳಿ ಮಂಜಯ್ಯ ಎಂಬ ದಲಿತ ವ್ಯಕ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ 4 ಕೋಟಿ ಬೆಲೆ ಬಾಳುವ 2 ಎಕರೆ ಜಾಗವನ್ನು ಕೇವಲ 4 ಲಕ್ಷ ರೂ.ಗಳಿಗೆ ಹೆಬ್ಬೆಟ್ಟು ಒತ್ತಿಸಿಕೊಂಡು ಕೊಂಡುಕೊಂಡಿದ್ದಾರೆ. ಸಿಪಿಐ ಮುಖಂಡರು ಬಡವರಿಗೆ ಸೂರು ನೀಡುತ್ತೇವೆಂದು ಸುಳ್ಳು ಹೇಳಿ ಮಾನಹಾನಿಕರ ಪ್ರತಿಭಟನೆಗೆ ಇಳಿದಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ತಾನೂ ಅಟ್ರಾಸಿಟಿ ಪ್ರಕರಣ ಹಾಕಿಸಬಹುದು. ಆದರೆ ತಾನು ಜೀವನದಲ್ಲಿ ಅಟ್ರಾಸಿಟಿ ಬಳಸಿದ್ದಾರೆಂಬ ಅಪವಾದ ಇರಬಾರದೆಂದು ಸುಮ್ಮನಿದ್ದೇನೆ. ಸುಳ್ಳು ಅಟ್ರಾಸಿಟಿ ಸಮಾಜವನ್ನು ಒಡೆಯುತ್ತದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಕಣ್ಣೀರಿಟ್ಟ ಪ್ರಸಂಗ ನಡೆಯಿತು.

ಬೆಳೆಗಾರ ಸಂಘದ ಅಧ್ಯಕ್ಷ ಭಾಲಕೃಷ್ಣ, ನಾಗರೀಕ ಹೋರಾಟ ಸಮಿತಿ ಅಧ್ಯಕ್ಷ ಚಂದ್ರೇಶ್‌, ತಾ.ಪಂ. ಅಧ್ಯಕ್ಷ ಕೆ.ಸಿ.ರತನ್‌, ಜೇನು ಸಹಕಾರ ಸಂಘದ ಅಧ್ಯಕ್ಷ ದುಂಡುಗ ಪ್ರಮೋದ್‌, ದಲಿತ ಸಂಘದ ಮುಖಂಡ ಲೋಕೇಶ್‌ ಮಾತನಾಡಿದರು.

ಜಿ.ಪಂ. ಸದಸ್ಯರಾದ ಶಾಮಣ್ಣ, ಸುಧಾ ಯೋಗೇಶ್‌, ಅಮಿತಾ ಮುತ್ತಪ್ಪ, ತಾ.ಪಂ. ಉಪಾಧ್ಯಕ್ಷೆ ಸವಿತಾ ರಮೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್‌ ಕುಮಾರ್‌, ಸದಸ್ಯರಾದ ವೀಣಾ ಉಮೇಶ್‌, ಭಾರತೀ ರವೀಂದ್ರ, ಪ್ರಮಿಳಾ, ದೇವರಾಜು, ಪ.ಪಂ. ಸದಸ್ಯೆ ಲತಾ ಲಕ್ಷ ್ಮಣ್‌, ರೈತ ಸಂಘದ ಮುಖಂಡ ದಿವಾಕರ್‌, ಮುಖಂಡರಾದ ವಿ.ಕೆ.ಶಿವೇಗೌಡ, ಅರೆಕುಡಿಗೆ ಶಿವಣ್ಣ, ಬಾಳೂರು ಭರತ್‌, ಜಯಂತ್‌, ಕಲ್ಲೇಶ್‌, ಸುದರ್ಶನ್‌, ಸರೋಜಾ ಸುರೇಂದ್ರ, ಪಂಚಾಕ್ಷ ರಿ, ಜೆ.ಎಸ್‌.ರಘು, ವಿನೋದ್‌ ಕಣಚೂರು ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ