ಆ್ಯಪ್ನಗರ

ಸಂವಿಧಾನವೇ ಕಾನೂನುಗಳ ತಾಯಿಬೇರು

ಕಾನೂನುಗಳ ತಾಯಿಬೇರು ಸಂವಿಧಾನ. ನ್ಯಾಯಮೂರ್ತಿಗಳು, ನ್ಯಾಯವಾದಿಗಳು ಸಂವಿಧಾನ ಓದಬೇಕು ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಸಲಹೆ ಮಾಡಿದರು.

Vijaya Karnataka 30 Jun 2019, 5:00 am
ಚಿಕ್ಕಮಗಳೂರು : ಕಾನೂನುಗಳ ತಾಯಿಬೇರು ಸಂವಿಧಾನ. ನ್ಯಾಯಮೂರ್ತಿಗಳು, ನ್ಯಾಯವಾದಿಗಳು ಸಂವಿಧಾನ ಓದಬೇಕು ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಸಲಹೆ ಮಾಡಿದರು.
Vijaya Karnataka Web CKM-29ARAGAP3


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ, ಪೊಲೀಸ್‌, ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕು ಪಂಚಾಯಿತಿ, ಗೃಹರಕ್ಷಕ ದಳ, ಮಲೆನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಶನಿವಾರ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರು, ನ್ಯಾಯಾಲಯ ಸಿಬ್ಬಂದಿಗೆ ಆಯೋಜಿಸಿದ್ದ ಸಂವಿಧಾನ ಓದು ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬ ನ್ಯಾಯಾಧೀಶರು, ವಕೀಲರು ಸಂವಿಧಾನವನ್ನು ಅರಿತಾಗ ಮಾತ್ರ ನ್ಯಾಯಾಲಯದಲ್ಲಿ ಬರುವ ವಿವಿಧ ಪ್ರಕರಣಗಳಿಗೆ ಗುಣಾತ್ಮಕ ನ್ಯಾಯ ಒದಗಿಸಬಹುದು ಎಂದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಪ್ರಾಸ್ತಾವಿಕ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ, ನ್ಯಾ.ಬಸವರಾಜ ಚೇಂಗಟಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೆ.ಎಲ್‌.ಅಶೋಕ್‌, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ, ವಕೀಲರ ಸಂಘದ ಕಾರ‍್ಯದರ್ಶಿ ಡಿ.ಸಿ.ಪುಟ್ಟೇಗೌಡ, ಸಂವಿಧಾನ ಓದು ಸಮಿತಿ ಸಂಚಾಲಕಿ ಕೆ.ಎಸ್‌.ವಿಮಲ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ