ಆ್ಯಪ್ನಗರ

ಕಡೂರಲ್ಲಿ ಭೂಮಿ ತಂಪಾಗಿಸಿದ ಮಳೆ

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಭಾಗಗಳಲ್ಲಿ ಗುರುವಾರ ರಾತ್ರಿ ಮೂರು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದು ಭೂಮಿಯನ್ನು ತಂಪಾಗಿಸಿದೆ. ಜಡಿ ಮಳೆಯಿಂದಾಗಿ ಜನಸಾಮಾನ್ಯರ ಮತ್ತು ರೈತರ ಮುಖದಲ್ಲಿ ಹರ್ಷ ತಂದಿದೆ.

Vijaya Karnataka 8 Jun 2019, 5:00 am
ಕಡೂರು: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಭಾಗಗಳಲ್ಲಿ ಗುರುವಾರ ರಾತ್ರಿ ಮೂರು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದು ಭೂಮಿಯನ್ನು ತಂಪಾಗಿಸಿದೆ. ಜಡಿ ಮಳೆಯಿಂದಾಗಿ ಜನಸಾಮಾನ್ಯರ ಮತ್ತು ರೈತರ ಮುಖದಲ್ಲಿ ಹರ್ಷ ತಂದಿದೆ.
Vijaya Karnataka Web 7KDR5


ರಾತ್ರಿ ಸುಮಾರು 1.15ಕ್ಕೆ ಆರಂಭವಾದ ಮಳೆ ಬೆಳಗಿನ ಜಾವ 4 ಗಂಟೆಯವರೆಗೆ ಸುರಿಯಿತು. ಕಡೂರು ಪಟ್ಟಣ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲೂ ಕೂಡ ಮಳೆ ಬಂದಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ತತ್ತರಿಸಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮಳೆಯ ರಭಸಕ್ಕೆ ಪಟ್ಟಣದ ಬಹುತೇಕ ಚರಂಡಿ ಕಸವೆಲ್ಲಾ ರಸ್ತೆಗೆ ಹರಿದಿದ್ದು, ಕೆಲವೆಡೆ ರಸ್ತೆ ಜಲಾವೃತವಾಗಿ ಜನರು ನಡೆದಾಡಲು ಪರದಾಡಿದರು. ಬಸ್‌ ನಿಲ್ದಾಣದ ಬಳಿಯ ರೈಲ್ವೆ ಅಂಡರ್‌ಬ್ರಿಡ್ಜ್‌ ಕೆಳಗೆ ನೀರು ನಿಂತು ಸಂಚಾರಿಗಳಿಗೆ ತೀವ್ರ ತೊಂದರೆಯಾಗಿದೆ.

ಹೊಲ ತೋಟಗಳು ಮತ್ತು ತಗ್ಗು ಪ್ರದೇಶದಲ್ಲಿಯೂ ನೀರು ನಿಂತಿದ್ದು, ಬಿತ್ತನೆ ಮಾಡುವ ರೈತರ ಮೊಗದಲ್ಲಿ ಸಂತಸ ಮೂಡಿದೆ. ಕಳೆದ ಮೂರ್ನಾಲ್ಕು ದಿನದಿಂದ ರಾತ್ರಿಯ ವೇಳೆ ಮಳೆ ಬರುತ್ತಿದ್ದು, ಗುರುವಾರ ರಾತ್ರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ