ಸಿಡಿಲು ಬಡಿದು ದಂಪತಿ ಸಾವು
ತಾಲೂಕಿನ ತೇಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದಂಪತಿ ಮೃತಪಟ್ಟಿದ್ದಾರೆ.
Vijaya Karnataka 30 Apr 2019, 5:00 am
ಚಿಕ್ಕಮಗಳೂರು : ತಾಲೂಕಿನ ತೇಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದಂಪತಿ ಮೃತಪಟ್ಟಿದ್ದಾರೆ.
ಕೃಷಿಯ ಜತೆಗೆ ಫೋಟೊಗ್ರಫಿ ವೃತ್ತಿಯನ್ನೂ ಮಾಡುತ್ತಿದ್ದ ಮಂಜುನಾಥ ಆಚಾರಿ (51) ಹಾಗೂ ಅವರ ಪತ್ನಿ ಭಾರತಿ (44) ಮೃತಪಟ್ಟವರು.
ತೇಗೂರು ಗ್ರಾಮದ ಜಮೀನು ಬಳಿ ಮನೆ ಮಾಡಿಕೊಂಡು ವಾಸವಿದ್ದ ದಂಪತಿ, ಸಮೀಪದಲ್ಲಿರುವ ಕೆರೆ ಬಳಿ ಹಸುಗಳನ್ನು ಮೇಯಲು ಕಟ್ಟುತ್ತಿದ್ದರು. ಸಂಜೆ ಗುಡುಗು, ಸಿಡಿಲು ಸಹಿತ ಮಳೆ ಆರಂಭವಾಗುತ್ತಿದ್ದಂತೆ ಹಸುಗಳನ್ನು ಮನೆಗೆ ಹೊಡೆದುಕೊಂಡು ಬರಲು ಹೋಗಿದ್ದರು.
ಹಸುಗಳನ್ನು ಹೊಡೆದುಕೊಂಡು ಕೆರೆ ಏರಿ ಮೇಲೆ ಬರುತ್ತಿದ್ದ ಸಂದರ್ಭ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿಗೆ ಒಬ್ಬ ಮಗ ಮತ್ತು ಮಗಳು ಇದ್ದು ಕಾಲೇಜು ವ್ಯಾಸಂಗ ಮಾಡುತ್ತಿದ್ದಾರೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದಲ್ಲಿ ಸೋಮವಾರ ಸಂಜೆ ಗುಡುಗು, ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆಯಾಗಿದೆ. ಮಿಂಚು ಮತ್ತು ಸಿಡಿಲಿನ ಆರ್ಭಟಕ್ಕೆ ಜನ ಭೀತಿಗೊಂಡರು. ಜಿಲ್ಲೆಯ ಕೆಲವು ಕಡೆಗಳಲ್ಲಿ ಅರ್ಧ ಗಂಟೆ ಮಳೆ ಬಿದ್ದಿದೆ.
ಕೃಷಿಯ ಜತೆಗೆ ಫೋಟೊಗ್ರಫಿ ವೃತ್ತಿಯನ್ನೂ ಮಾಡುತ್ತಿದ್ದ ಮಂಜುನಾಥ ಆಚಾರಿ (51) ಹಾಗೂ ಅವರ ಪತ್ನಿ ಭಾರತಿ (44) ಮೃತಪಟ್ಟವರು.
ತೇಗೂರು ಗ್ರಾಮದ ಜಮೀನು ಬಳಿ ಮನೆ ಮಾಡಿಕೊಂಡು ವಾಸವಿದ್ದ ದಂಪತಿ, ಸಮೀಪದಲ್ಲಿರುವ ಕೆರೆ ಬಳಿ ಹಸುಗಳನ್ನು ಮೇಯಲು ಕಟ್ಟುತ್ತಿದ್ದರು. ಸಂಜೆ ಗುಡುಗು, ಸಿಡಿಲು ಸಹಿತ ಮಳೆ ಆರಂಭವಾಗುತ್ತಿದ್ದಂತೆ ಹಸುಗಳನ್ನು ಮನೆಗೆ ಹೊಡೆದುಕೊಂಡು ಬರಲು ಹೋಗಿದ್ದರು.
ಹಸುಗಳನ್ನು ಹೊಡೆದುಕೊಂಡು ಕೆರೆ ಏರಿ ಮೇಲೆ ಬರುತ್ತಿದ್ದ ಸಂದರ್ಭ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿಗೆ ಒಬ್ಬ ಮಗ ಮತ್ತು ಮಗಳು ಇದ್ದು ಕಾಲೇಜು ವ್ಯಾಸಂಗ ಮಾಡುತ್ತಿದ್ದಾರೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದಲ್ಲಿ ಸೋಮವಾರ ಸಂಜೆ ಗುಡುಗು, ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆಯಾಗಿದೆ. ಮಿಂಚು ಮತ್ತು ಸಿಡಿಲಿನ ಆರ್ಭಟಕ್ಕೆ ಜನ ಭೀತಿಗೊಂಡರು. ಜಿಲ್ಲೆಯ ಕೆಲವು ಕಡೆಗಳಲ್ಲಿ ಅರ್ಧ ಗಂಟೆ ಮಳೆ ಬಿದ್ದಿದೆ.