ಆ್ಯಪ್ನಗರ

ಬಿಜೆಪಿಗೆ ರೇಖಾ ಗುಡ್‌ ಬೈ, ಕೈ ಹಿಡಿಯಲು ನಿರ್ಧಾರ

ಕಡೂರು ಕ್ಷೇತ್ರದಲ್ಲಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಾರ‍್ಯಕಾರಿಣಿ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರೇಖಾ ಹುಲಿಯಪ್ಪಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ಅಭ್ಯರ್ಥಿ ಡಾ.ಬಿ.ಎಲ್‌.ಶಂಕರ್‌, ಮಾಜಿ ಎಂಎಲ್ಸಿ ಗಾಯತ್ರಿಶಾಂತೇಗೌಡ ಕಾಂಗ್ರೆಸ್‌ಗೆ ಆಹ್ವಾನಿಸಿದ್ದು, ಒಂದೆರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Vijaya Karnataka 29 Apr 2018, 5:00 am
ಚಿಕ್ಕಮಗಳೂರು : ಕಡೂರು ಕ್ಷೇತ್ರದಲ್ಲಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಾರ‍್ಯಕಾರಿಣಿ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರೇಖಾ ಹುಲಿಯಪ್ಪಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ಅಭ್ಯರ್ಥಿ ಡಾ.ಬಿ.ಎಲ್‌.ಶಂಕರ್‌, ಮಾಜಿ ಎಂಎಲ್ಸಿ ಗಾಯತ್ರಿಶಾಂತೇಗೌಡ ಕಾಂಗ್ರೆಸ್‌ಗೆ ಆಹ್ವಾನಿಸಿದ್ದು, ಒಂದೆರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Vijaya Karnataka Web the decision to hold hands on the bjp is good
ಬಿಜೆಪಿಗೆ ರೇಖಾ ಗುಡ್‌ ಬೈ, ಕೈ ಹಿಡಿಯಲು ನಿರ್ಧಾರ


ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಖಾಹುಲಿಯಪ್ಪಗೌಡ, ಬಿಜೆಪಿಯಲ್ಲಿ ಹಿಂದುಳಿದ ವರ್ಗದವರಿಗೆ ಮಾಡುತ್ತಿರುವ ಅನ್ಯಾಯ ವಿರೋಧಿಸಿ ರಾಜೀನಾಮೆ ಕೊಡುತ್ತಿದ್ದೇನೆ. ಕಳೆದ 3 ವಿಧಾನಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ಮೀಸಲಿಗೆ ಮಾತ್ರ ನಾವು ಸೀಮಿತ ಎಂಬ ಮನೋಭಾವ ಬಿಜೆಪಿಯಲ್ಲಿದೆ ಎಂದು ಆರೋಪಿಸಿದರು.

2004ರಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಬಲಿಷ್ಠವಾಗಿರಲಿಲ್ಲ. ಆಗ ಎರಡು ಕ್ಷೇತ್ರದಲ್ಲಿ ಹಿಂದುಳಿದ ವರ್ಗದವರಿಗೆ ಅವಕಾಶ ನೀಡಲಾಗಿತ್ತು. ನಂತರ ನಾವು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು, ನಮ್ಮನ್ನು ಗುರುತಿಸಿ ಅವಕಾಶ ಕೊಡಲಿಲ್ಲ. ಹಿಂದುಳಿದ ವರ್ಗಕ್ಕೆ ಸೇರಿದ ನಾನು ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಪ್ರತಿಭಟಿಸುವುದು ಅನಿವಾರ‍್ಯ. ತರೀಕೆರೆಯಲ್ಲಿ ಎಚ್‌.ಎಂ.ಗೋಪಿಕೃಷ್ಣ ಅವರಿಗೆ ಬಿಜೆಪಿ ಟಿಕೆಟ್‌ ಕೊಟ್ಟಿದ್ದರೂ ಈ ನಿರ್ಧಾರ ಕೈಗೊಳ್ಳುತ್ತಿರಲಿಲ್ಲ. ಆದರೆ, ಆ ಕ್ಷೇತ್ರದಲ್ಲೂ ಕಡೆಗಣಿಸಿದ್ದರಿಂದ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳಬೇಕಾಯಿತು ಎಂದರು.

ಋುಣ ತೀರಿಸಿದ್ದೇನೆ

ಬಿಜೆಪಿ ತಮಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ, ತೆಂಗು ಮತ್ತು ನಾರು ಮಂಡಳಿ ಅಧ್ಯಕ್ಷ ಸ್ಥಾನ ನೀಡಿತ್ತು. ಜಿ.ಪಂ.ನಲ್ಲಿ ಶ್ರಮ ವಹಿಸಿ ಕೆಲಸ ಮಾಡುವ ಮೂಲಕ ರಾಷ್ಟ್ರ ಪ್ರಶಸ್ತಿ ಬರಲು ಕಾರಣವಾದೆ. ನಷ್ಟದಲ್ಲಿದ್ದ ತೆಂಗು ಮತ್ತು ನಾರು ಮಂಡಳಿಯನ್ನು ಲಾಭಕ್ಕೆ ತಂದು ಪಕ್ಷ ವಹಿಸಿದ್ದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಋುಣ ತೀರಿಸಿದ್ದೇನೆ ಎಂದು ಹೇಳಿದರು.

ವಿಧಾನ ಪರಿಷತ್‌ಗೆ ಸ್ಪರ್ಧಿಸುವಂತೆ ಪಕ್ಷ ಹೇಳಿದ್ದು ನಿಜ. ಆದರೆ, ನನಗೆ ಕಡೂರು ಕ್ಷೇತ್ರದಿಂದಲೇ ಟಿಕೆಟ್‌ ನೀಡುವಂತೆ ಕೇಳಿದ್ದೆ. ವಿಧಾನ ಪರಿಷತ್‌ಗೆ ಸ್ಪರ್ಧಿಸುವುದು ನನಗೆ ಇಷ್ಟವಿರಲಿಲ್ಲ. ಪಕ್ಷ ನನ್ನ ಬೇಡಿಕೆ ಪರಿಗಣಿಸದೆ ಕಡೆಗಣಿಸಿತು. ಈ ಹಿನ್ನೆಲೆಯಲ್ಲಿ ಹಿತೈಷಿಗಳೊಂದಿಗೆ ಚರ್ಚಿಸಿ ರಾಜೀನಾಮೆ ನೀಡುವ ನಿರ್ಧಾರ ಮಾಡಿದೆ ಎಂದರು. ಬಿಳೇಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಸದಸ್ಯ ಬಿ.ವಿ.ಪುಟ್ಟೇಗೌಡ, ನಿಂಗೇಗೌಡ, ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ