ಆ್ಯಪ್ನಗರ

ಬಿಜೆಪಿಗೆ ಸೋಲು,ಕಾಂಗ್ರೆಸ್‌ ವಿಜಯೋತ್ಸವ

ದೇಶದ 5ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನೆಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

Vijaya Karnataka 12 Dec 2018, 5:00 am
ಚಿಕ್ಕಮಗಳೂರು : ದೇಶದ 5ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನೆಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.
Vijaya Karnataka Web CKM-11RUDRAP3


ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂದೆ ಸಮಾವೇಶಗೊಂಡ ಪಕ್ಷದ ಹಲವಾರು ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಿದರಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಡಿ.ಎಲ್‌.ವಿಜಯ್‌ಕುಮಾರ್‌ ಮಾತನಾಡಿ, ಕಾಂಗ್ರೆಸ್‌ ಮುಕ್ತ ಭಾರತ ಎಂದು ಸದಾ ಹೇಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಭಗ್ನವಾಗಿದೆ. ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಪಾಠವನ್ನು 5 ರಾಜ್ಯದ ಚುನಾವಣೆಯಲ್ಲಿ ಮತದಾರರು ಕಲಿಸಿದ್ದಾರೆ ಎಂದು ಟೀಕಿಸಿದರು.

ಕಳೆದ 5 ವರ್ಷದ ಹಿಂದೆ ಸ್ವಿಸ್‌ ಬ್ಯಾಂಕಿನಿಂದ ಕಪ್ಪು ಹಣ ತರುತ್ತೇನೆ. ಪ್ರತಿಯೊಬ್ಬನ ಖಾತೆಗೂ 15 ಲಕ್ಷ ರೂ.ಹಣ ತಲುಪಲಿದೆ ಎಂದೆಲ್ಲಾ ಹೇಳಿ ಧರ್ಮದ ಮಂತ್ರ ಜಪಿಸುತ್ತ ಅಧಿಕಾರಕ್ಕೆ ಬಂದ ಮೋದಿ ಕಳೆದ 4 ವರ್ಷದಲ್ಲಿ ಸರ್ವಾಧಿಕಾರಿಯಾಗಿ ಮರೆದಿರುವುದನ್ನು ಈ ದೇಶದ ಜನ ಸಹಿಸಲಾರರು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್‌. ಮೂರ್ತಿ ಮಾತನಾಡಿ, ಐಕ್ಯತೆಯಿಂದಿರುವ ಈ ದೇಶದ ಜನರ ಮಧ್ಯೆ ಜಾತಿ, ಧರ್ಮದ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬಂದ ಬಿಜೆಪಿ, ಕೇವಲ 5 ವರ್ಷದಲ್ಲೇ ಇಂತಹ ಹೀನ ಸ್ಥಿತಿಗೆ ಬಂದಿದೆ ಎಂದು ಟೀಕಿಸಿದರು.

ಬ್ಯಾರಿ ಸಾಹಿತ್ಯ ಆಕಾಡೆಮಿ ಅಧ್ಯಕ್ಷ ಕೆ.ಮೊಹಮ್ಮದ್‌ , ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಮಾತನಾಡಿದರು. ಮುಖಂಡರಾದ ಕಾರ್ತಿಕ್‌.ಜಿ.ಚೆಟ್ಟಿಯಾರ್‌, ಕೆ.ವಿ. ಶಿವಕುಮಾರ್‌, ಜಂಷಿದ್‌, ಆದಿಲ್‌, ನಾಸೀರ್‌, ಕೆಪಿಸಿಸಿ ಸದಸ್ಯ ಕೆಂಪನಹಳ್ಳಿ ಮಂಜುನಾಥ್‌, ಸಿಡಿಎ ಮಾಜಿ ಅಧ್ಯಕ್ಷ ಹನೀಫ್‌, ನಗೀನ ಮತ್ತಿತರರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ