ಆ್ಯಪ್ನಗರ

ರಸ್ತೆಯಲ್ಲಿ ಸಂತೆ ವ್ಯಾಪಾರ ನಡೆಸಿದರೆ ದಂಡ

ಪಟ್ಟಣದಲ್ಲಿ ಭಾನುವಾರದ ಸಂತೆ ದಿನ ಮುಖ್ಯ ರಸ್ತೆಯಲ್ಲಿ ತರಕಾರಿ, ಇನ್ನಿತರ ವಸ್ತುಗಳ ವ್ಯಾಪಾರ ವಹಿವಾಟು ಮಾಡಿದಲ್ಲಿ ದಂಡ ವಿಧಿಸಲಾಗುವುದೆಂದು ಬಿ.ಕಣಬೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಸೋಮಶೇಖರ್‌ ತಿಳಿಸಿದ್ದಾರೆ.

Vijaya Karnataka 10 Dec 2018, 5:00 am
ಬಾಳೆಹೊನ್ನುರು : ಪಟ್ಟಣದಲ್ಲಿ ಭಾನುವಾರದ ಸಂತೆ ದಿನ ಮುಖ್ಯ ರಸ್ತೆಯಲ್ಲಿ ತರಕಾರಿ, ಇನ್ನಿತರ ವಸ್ತುಗಳ ವ್ಯಾಪಾರ ವಹಿವಾಟು ಮಾಡಿದಲ್ಲಿ ದಂಡ ವಿಧಿಸಲಾಗುವುದೆಂದು ಬಿ.ಕಣಬೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಸೋಮಶೇಖರ್‌ ತಿಳಿಸಿದ್ದಾರೆ.
Vijaya Karnataka Web CKM-9bhr2


ಅವರು ಭಾನುವಾರ ಪಟ್ಟಣದ ಮುಖ್ಯ ರಸ್ತೆ ಬದಿಯ ಸಂತೆ ವ್ಯಾಪಾರಸ್ಥರೊಂದಿಗೆ ಮಾತನಾಡಿ, ಬಾಳೆಹೊನ್ನೂರಿನ ಮಾರ್ಕೆಟ್‌ ರಸ್ತೆಯಲ್ಲಿ ಸುಮಾರು 79ಲಕ್ಷ ರೂ ವೆಚ್ಚದಲ್ಲಿ ನೂತವಾಗಿ ಸುಸಜ್ಜಿತವಾದ ಮುಚ್ಚು ಸಂತೆ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಸಂತೆ ವ್ಯಾಪಾರಸ್ಥರು ಈ ಮಾರುಕಟ್ಟೆಯಲ್ಲಿಯೇ ತಮ್ಮ ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚನೆ ನೀಡಿದರು.

ಸಂತೆ ದಿನ ಪಟ್ಟಣದ ಮುಖ್ಯ ರಸ್ತೆಯ ಎರಡೂ ಪಕ್ಕದಲ್ಲಿ ತರಕಾರಿ ಹಾಗೂ ಇನ್ನಿತರೆ ವಸ್ತುಗಳನ್ನಿಟ್ಟುಕೊಂಡು ವ್ಯಾಪಾರ ಮಾಡುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂತೆ ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ಮುಂಬರುವ ಭಾನುವಾರದಿಂದ ಮಾರುಕಟ್ಟೆಯಲ್ಲಿಯೇ ತಮ್ಮ ವ್ಯಪಾರ ವಹಿವಾಟು ನಡೆಸಬೇಕು. ತಪ್ಪಿದ್ದಲ್ಲಿ ಸೂಕ್ತ ಕ್ರಮ ಕೈಗೊಂಡು ಡಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ.ಅಧ್ಯಕ್ಷ ಮಹಮ್ಮದ್‌ ಹನೀಫ್‌ ಮಾತನಾಡಿ, ಬಿ.ಕಣಬೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿರುವುದರ ಹಿನ್ನೆಲೆಯಲ್ಲಿ, ಸಂತೆ ವ್ಯಾಪಾರಸ್ಥರು, ಅಂಗಡಿ ಮಾಲೀಕರು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಪ್ಲಾಸ್ಟಿಕ್‌ ಕವರ್‌ಗಳನ್ನು ಬಳಸದೆ ಪ್ಲಾಸ್ಟಿಕ್‌ ಮುಕ್ತ ಗಾಮ ಪಂಚಾಯಿತಿಯನ್ನಾಗಿಸಲು ಸಹಕರಿಸಬೇಕೆಂದರು.

ಈ ಸಂದರ್ಭದಲ್ಲಿ ಬಿ.ಕಣಬೂರು ಗ್ರಾ.ಪಂ. ಸಿಬ್ಬಂದಿ ಹೊನ್ನೆಗೌಡ, ಮಂಜು ಸಮಾಜ ಸೇವಕ ಬಿ.ಎಂ.ಅಶ್ರಫ್‌ ಮತ್ತಿತರರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ