ಆ್ಯಪ್ನಗರ

ಯುವ ಬ್ರಿಗೇಡ್‌ನಿಂದ ಮತ್ತೊಮ್ಮೆ ದಿಗ್ವಿಜಯ

ಚಿಕಾಗೊದಲ್ಲಿ ಸ್ವಾಮಿ ವಿವೇಕಾನಂದರು ಭಾಷಣ ಮಾಡಿ 125 ವರ್ಷ ಕಳೆದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್‌ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಅ.4ರಂದು ನಗರದಲ್ಲಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ಆಯೋಜಿಸಲಾಗಿದೆ ಎಂದು ಬ್ರಿಗೇಡ್‌ ಜಿಲ್ಲಾ ಸಂಚಾಲಕ ಮಂಜುನಾಥ್‌ ತಿಳಿಸಿದರು.

Vijaya Karnataka 30 Sep 2018, 5:00 am
ಚಿಕ್ಕಮಗಳೂರು : Zಚಿಕಾಗೊದಲ್ಲಿ ಸ್ವಾಮಿ ವಿವೇಕಾನಂದರು ಭಾಷಣ ಮಾಡಿ 125 ವರ್ಷ ಕಳೆದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್‌ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಅ.4ರಂದು ನಗರದಲ್ಲಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ಆಯೋಜಿಸಲಾಗಿದೆ ಎಂದು ಬ್ರಿಗೇಡ್‌ ಜಿಲ್ಲಾ ಸಂಚಾಲಕ ಮಂಜುನಾಥ್‌ ತಿಳಿಸಿದರು.
Vijaya Karnataka Web the triumph of the young brigade again
ಯುವ ಬ್ರಿಗೇಡ್‌ನಿಂದ ಮತ್ತೊಮ್ಮೆ ದಿಗ್ವಿಜಯ


ರಥಯಾತ್ರೆ ಅಂಗವಾಗಿ ಅಂದು ಮಧ್ಯಾಹ್ನ 2ಕ್ಕೆ ಹನುಮಂತಪ್ಪ ಸರ್ಕಲ್‌ನಿಂದ ಕುವೆಂಪು ಕಲಾ ಮಂದಿರದವರೆಗೆ ಶೋಭಾಯಾತ್ರೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಕುವೆಂಪು ಕಲಾ ಮಂದಿರದಲ್ಲಿ ಕಾರ‍್ಯಕ್ರಮ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾರದಾಶ್ರಮದ ಪ್ರವಾಜಿಕಾ ಶುಭವ್ರತಪ್ರಾಣಾ, ಶಂಕರದೇವರ ಮಠದ ಶ್ರೀಚಂದ್ರಶೇಖರ ಶಿವಾಚಾರ‍್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್‌, ಅಧ್ಯಾತ್ಮ ಚಿಂತಕಿ ವೀಣಾ ಬನ್ನಂಜೆ, ರಾಷ್ಟ್ರೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡುವರು ಎಂದರು.

ಕಾರ‍್ಯಕ್ರಮದ ಅಂಗವಾಗಿ ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ ಕಾರ‍್ಯಕ್ರಮ ನಡೆಸಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿವೇಕಾನಂದರ ಸಾಹಿತ್ಯ ಪ್ರದರ್ಶನ, ಮಾರಾಟ, ಜ್ಞಾನಸುಧಾ ರಸಪಾನಗಳ ಮೂಲಕ ರಥಯಾತ್ರೆಯನ್ನು ವಿಶಿಷ್ಟಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಸೋದರಿ ನಿವೇದಿತಾ ಪ್ರತಿಷ್ಠಾನದ ಜಿಲ್ಲಾ ಸಂಚಾಲಕಿ ಸುಮಾ ಬಾಲಾಜಿ, ತರೀಕೆರೆ ತಾಲೂಕು ಸಂಚಾಲಕಿ ಅರ್ಪಿತಾಕಾರ್ತಿಕ್‌, ಯುವ ಬ್ರಿಗೇಡ್‌ ಕಾರ‍್ಯದರ್ಶಿ ಬಾಲಾಜಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ