ಆ್ಯಪ್ನಗರ

ಅಸಂಘಟಿತ ಕಾರ್ಮಿಕರ ಸಂಘಟನೆ ಬಲಗೊಳ್ಳಬೇಕಿದೆ

ಅಸಂಘಟಿತ ಕಾರ್ಮಿಕರ ಸಂಘಟನೆ ಬಲಗೊಳ್ಳಬೇಕಿದ್ದು, ಇದಕ್ಕಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವುದಾಗಿ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ಶಾಂತವೀರ ನಾಯ್ಕ್‌ ಹೇಳಿದರು.

Vijaya Karnataka 3 Jun 2019, 5:00 am
ಶೃಂಗೇರಿ : ಅಸಂಘಟಿತ ಕಾರ್ಮಿಕರ ಸಂಘಟನೆ ಬಲಗೊಳ್ಳಬೇಕಿದ್ದು, ಇದಕ್ಕಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವುದಾಗಿ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ಶಾಂತವೀರ ನಾಯ್ಕ್‌ ಹೇಳಿದರು.
Vijaya Karnataka Web CKM-2SRI3


ಪಟ್ಟಣದ ಹನುಮಂತ ನಗರದಲ್ಲಿ ಭಾನುವಾರ ತಾಲೂಕು ಕಾಂಗ್ರೆಸ್‌ ಅಸಂಘಟಿತ ಕಾರ್ಮಿಕ ಸಂಘ ನೀಡಿದ ಗೌರವ ಸ್ವೀಕರಿಸಿ ಮಾತನಾಡಿದರು. ಈಗಾಗಲೇ ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಸಹಾಯಧನ ನೀಡುತ್ತಿದೆ. ಕಾರ್ಮಿಕರು ಸಂಘದಲ್ಲಿ ತಮ್ಮ ಹೆಸರು ನೋಂದಾಯಿಸಬೇಕು. ಇದರೊಂದಿಗೆ ವಿಮಾ ಸೌಲಭ್ಯವೂ ಇದ್ದು ಕಾರ್ಮಿಕರು ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿದರು. ನಂತರ ನರಸಿಂಹವನಕ್ಕೆ ತೆರಳಿ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷ ಶಂಕರಚಾರ್‌ ರಾಜ್ಯಧ್ಯಕ್ಷ ರನ್ನು ಗೌರವಿಸಿದರು. ಪ.ಪಂ. ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಶೆಟ್ಟಿ, , ಪ.ಪಂ. ಸದಸ್ಯೆ ರೂಪಾ, ಮುರುಳಿಧರ ಪೈ, ವಸಂತಿ, ಶಾಂತಮ್ಮ, ಸೌಮ್ಯ, ಪ್ರೇಮಾ, ಮುನ್ಷೀದ್‌, ಸುರೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ