ಆ್ಯಪ್ನಗರ

ಚಿಕ್ಕಮಗಳೂರಲ್ಲಿ ಹಲಸಿನ ಹಣ್ಣಿಗೆ ವಿಷ ಬೆರೆಸಿ 3 ಹಸುಗಳ ಹತ್ಯೆ!

ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಆನೆಯೊಂದನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಲಸಿನ ಹಣ್ಣಿನಲ್ಲಿ ವಿಷ ಬೆರೆಸಿ ಮೂರು ದನಗಳನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಬಸರವಳ್ಳಿಯಲ್ಲಿ ನಡೆದಿದೆ.

Vijaya Karnataka Web 9 Jun 2020, 10:04 am
ಚಿಕ್ಕಮಗಳೂರು : ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಆನೆಯೊಂದನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಲಸಿನ ಹಣ್ಣಿನಲ್ಲಿ ವಿಷ ಬೆರೆಸಿ ಮೂರು ದನಗಳನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಬಸರವಳ್ಳಿಯಲ್ಲಿ ನಡೆದಿದೆ.
Vijaya Karnataka Web cow chikkamagaluru


ತೋಟಕ್ಕೆ ನುಗ್ಗುತ್ತವೆ ಎಂಬ ಕಾರಣಕ್ಕೆ ಹಲಸಿನ ಹಣ್ಣಿಗೆ ವಿಷ ಹಾಕಿಟ್ಟಿದ್ದು, ಇದನ್ನು ತಿಂದು ಮೂರು ದನಗಳು ಸಾವನ್ನಪ್ಪಿವೆ. ಮನುಷ್ಯನ ಕ್ರೌರ್ಯಕ್ಕೆ ಮೂಕ ಜೀವಿಗಳು ಬಲಿಯಾಗುತ್ತಲೇ ಇವೆ. ದುರುಳರ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಕಿಟ್ಟೇಗೌಡ, ಮಧು ಎಂಬುವರಿಗೆ ಸೇರಿದ ದನಗಳು ಹಲಸಿನ ಹಣ್ಣು ತಿಂದು ಮೃತಪಟ್ಟಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ: ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ನಡೆದ ಗರ್ಭಿಣಿ ಆನೆಯ ಹತ್ಯೆ ಘಟನೆ ಇಡೀ ದೇಶದ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯ ಬಳಿಕ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ದೇಶದ ಉದ್ದಗಲಕ್ಕೂ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಕ್ರಮವಹಿಸಲು ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪರಿಗೆ ಮನವಿ ಪತ್ರ ಬರೆದಿದ್ದರು. ಆದರೆ, ಇದೀಗ ರಾಜ್ಯದಲ್ಲೂ ಇಂತಹ ಅಮಾನವೀಯ ಕೃತ್ಯ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ