ಆ್ಯಪ್ನಗರ

ಇಂದು ರದ್ದಾಗಲಿದೆ ಆಲ್ದೂರು ಸಂತೆ

ಪಟ್ಟಣದಲ್ಲಿ ಶನಿವಾರ ನಡೆಯಬೇಕಿದ್ದ ವಾರದ ಸಂತೆ ದತ್ತಜಯಂತಿ ಹಿನ್ನೆಲೆಯಲ್ಲಿ ರದ್ದಾಗಲಿದೆ. ಶನಿವಾರದ ಸಂತೆಯನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Vijaya Karnataka 22 Dec 2018, 5:00 am
ಆಲ್ದೂರು : ಪಟ್ಟಣದಲ್ಲಿ ಶನಿವಾರ ನಡೆಯಬೇಕಿದ್ದ ವಾರದ ಸಂತೆ ದತ್ತಜಯಂತಿ ಹಿನ್ನೆಲೆಯಲ್ಲಿ ರದ್ದಾಗಲಿದೆ. ಶನಿವಾರದ ಸಂತೆಯನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web today will be canceled market
ಇಂದು ರದ್ದಾಗಲಿದೆ ಆಲ್ದೂರು ಸಂತೆ


ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತ, ಸಂತೆಯನ್ನು ರದ್ದುಪಡಿಸಿದ್ದು, ಇದರಿಂದ ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ಅನಾನೂಕೂಲವಾಗಲಿದೆ.

ವಾರದಲ್ಲಿ ಸಂತೆಯ ದಿನ ಮಾತ್ರ ಪಟ್ಟಣದ ಅಂಗಡಿಗಳಿಗೆ ವ್ಯಾಪಾರವಿದ್ದು ಬಂದ್‌ ಮಾಡಿಸಲು ಸೂಚಿಸಿರುವುದರಿಂದ ವರ್ತಕರು ಈ ತೀರ್ಮಾನದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಈ ಹಿಂದೆ ನಡೆದಿದ್ದ ಅಹಿತಕರ ಘಟನೆಯನ್ನೇ ಆಧಾರವಾಗಿಟ್ಟುಕೊಂಡು ಪ್ರತಿ ಬಾರಿ ದತ್ತಜಯಂತಿಗೂ ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿ ಅಂಗಡಿಗಳನ್ನು ಬಂದ್‌ ಮಾಡಿಸುವುದರಿಂದ ತೊಂದರೆಯಾಗುತ್ತಿದೆ. ಮುಂದಿನ ವರ್ಷಗಳಲ್ಲಿ ಬಂದ್‌ ಮಾಡಿಸುವ ಬದಲು ಪೋಲೀಸ್‌ ಬಂದೋಬಸ್ತ್‌ ಮಾಡಿ ವ್ಯಾಪಾರಸ್ಥರಿಗೆ, ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ವರ್ತಕರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ