ಆ್ಯಪ್ನಗರ

ಇಂದು, ನಾಳೆ ಜಿಲ್ಲೆಯ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

ನಗರದ ಹಳೆ ಜೈಲ್‌ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಡಿ.6ರಂದು ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ.

Vijaya Karnataka 6 Dec 2018, 5:00 am
ಚಿಕ್ಕಮಗಳೂರು: ನಗರದ ಹಳೆ ಜೈಲ್‌ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಡಿ.6ರಂದು ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ.
Vijaya Karnataka Web todaytomorrow the inauguration of indira canteen
ಇಂದು, ನಾಳೆ ಜಿಲ್ಲೆಯ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ


ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಬೆಳಗ್ಗೆ 10.30ಕ್ಕೆ ನಗರಕ್ಕೆ ಆಗಮಿಸಿ ಜಿ.ಪಂ.ಆವರಣದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹಳೆ ಜೈಲ್‌ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಲಿದ್ದಾರೆ. ಬಳಿಕ ಶಂಕರಪುರದಲ್ಲಿ ಕೊಳಚೆ ನಿರ್ಮೂಲನೆ ಮಂಡಳಿಯಿಂದ ಕೈತ್ತಿಕೊಂಡಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಮೂಡಿಗೆರೆಯಲ್ಲಿ, ಮಧ್ಯಾಹ್ನ 3ಕ್ಕೆ ಕಡೂರು, ಸಂಜೆ 4 ಗಂಟೆಗೆ ತರೀಕೆರೆಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸುವರು. ತರೀಕೆರೆಯಿಂದ ಗರ್ಗೆಕಾನ್‌ ಎಸ್ಟೇಟ್‌ಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. ಡಿ.7ರಂದು ಮಧ್ಯಾಹ್ನ 1.30ಕ್ಕೆ ನರಸಿಂಹರಾಜಪುರ, ಮಧ್ಯಾಹ್ನ 2.15ಕ್ಕೆ ಕೊಪ್ಪ, ಮಧ್ಯಾಹ್ನ 3.30ಕ್ಕೆ ಶೃಂಗೇರಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ