ಆ್ಯಪ್ನಗರ

ಪ್ರವಾಸಿ ಕಾರು ಪಲ್ಟಿ, ಅಪಾಯದಿಂದ ಪಾರು

ಪ್ರವಾಸಕ್ಕೆಂದು ಬಂದಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಾಲೂಕಿನ ಅರಳಗುಪ್ಪೆ ಬಳಿ ಕಾಫಿ ತೋಟಕ್ಕೆ ಪಲ್ಟಿಯಾಗಿ ಬಿದ್ದಿದ್ದು ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ.

Vijaya Karnataka 3 Dec 2018, 5:00 am
ಚಿಕ್ಕಮಗಳೂರು : ಪ್ರವಾಸಕ್ಕೆಂದು ಬಂದಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಾಲೂಕಿನ ಅರಳಗುಪ್ಪೆ ಬಳಿ ಕಾಫಿ ತೋಟಕ್ಕೆ ಪಲ್ಟಿಯಾಗಿ ಬಿದ್ದಿದ್ದು ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ.
Vijaya Karnataka Web CKM-2rudrap8


ಅಂಧ್ರಪ್ರದೇಶದ ವಿಜಯವಾಡದಿಂದ ಬಂದಿದ್ದ ಪ್ರವಾಸಿ ವಾಹನ ಎಕ್ಸ್‌ ಯುವಿ 500 ಬ್ರೇಕ್‌ ಫೇಲ್‌ ಆಗಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಚಾಲಕನಿಗೆ ಪೆಟ್ಟಾಗಿದ್ದು ವಾಹನದಲ್ಲಿದ್ದ ಉಳಿದ 6 ಪ್ರವಾಸಿಗರು ಯಾವುದೇ ತೊಂದರೆ ಇಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಿರಿ ಕಡೆಯಿಂದ ಬಂದ ಪ್ರವಾಸಿ ವಾಹನ ಅರಳಗುಪ್ಪೆ ಕಾಫಿ ತೋಟದ ತಿರುವಿನಲ್ಲಿ ಬ್ರೇಕ್‌ ಫೇಲ್‌ ಆಗಿ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿದೆ. ಪರಿಣಾಮ ಕಂಬಮುರಿದು ಬಿದ್ದಿದೆ. ಅಲ್ಲಿಂದ ಇಳಿಜಾರಿನಲ್ಲಿದ್ದ ಕಾಫಿ ತೋಟಕ್ಕೆ ಉರುಳಿ ಬಿದ್ದಿದ್ದು ವಾಹನದಲ್ಲಿ ಸುರಕ್ಷಾ ಕ್ರಮವಾಗಿ ಏರ್‌ಬ್ಯಾಗ್‌ ಅಳವಡಿಸಿದ್ದರಿಂದ ಒಳಗಿದ್ದವರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ