ಆ್ಯಪ್ನಗರ

ಚಾರ್ಮಾಡಿಯಲ್ಲಿ ಟ್ರಾಫಿಕ್‌ ಜಾಮ್‌: ಘನ ವಾಹನಗಳ ಸಂಚಾರ ನಿಷೇಧ

ಚಾರ್ಮಾಡಿ ಘಾಟ್‌ನಲ್ಲಿ ಘನವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗಿದ್ದು, ಇತರ ವಾಹನಗಳಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಘಾಟ್‌ನಲ್ಲಿ ಘನವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.

Vijaya Karnataka 19 Aug 2018, 7:56 am
ಕೊಟ್ಟಿಗೆಹಾರ(ಚಿಕ್ಕಮಗಳೂರು): ಚಾರ್ಮಾಡಿ ಘಾಟ್‌ನಲ್ಲಿ ಘನವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗಿದ್ದು, ಇತರ ವಾಹನಗಳಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಘಾಟ್‌ನಲ್ಲಿ ಘನವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.
Vijaya Karnataka Web ಚಾರ್ಮಾಡಿಯಲ್ಲಿ ಟ್ರಾಫಿಕ್‌ ಜಾಮ್‌: ಘನ ವಾಹನಗಳ ಸಂಚಾರ ನಿಷೇಧ


ದಕ್ಷಿಣಕನ್ನಡ ಜಿಲ್ಲೆಯ ಸಂಪರ್ಕಕ್ಕೆ ಏಕೈಕವಾಗಿ ಉಳಿದಿರುವ ಚಾರ್ಮಾಡಿ ಘಾಟಿಯಲ್ಲಿ ಶನಿವಾರ ಟ್ರಾಫಿಕ್‌ ಜಾಮ್‌ ಸಂಭವಿಸಿ 5ಕಿ.ಮೀ. ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

10ನೇ ಹಿಮ್ಮುರಿ ತಿರುವಿನಲ್ಲಿ ಟ್ರಕ್‌ವೊಂದು ಕೆಟ್ಟು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಶಿರಾಡಿ ಘಾಟ್‌ ಬಂದ್‌ ಆಗಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಿನ ಬಸ್‌ ಹಾಗೂ ವಾಹನಗಳು ಸಂಚರಿಸುತ್ತಿವೆ. ಘಾಟಿಯಲ್ಲಿ ದಟ್ಟವಾದ ಮಂಜು ಕವಿಯುತ್ತಿದ್ದು, ವಾಹನ ಸಂಚಾರ ದುಸ್ತರವಾಗುತ್ತಿದೆ. ಇದರಿಂದ ಧರ್ಮಸ್ಥಳ, ಮಂಗಳೂರಿಗೆ ತೆರಳುವ ಪ್ರಯಾಣಿಕರು ಪರದಾಡುವಂತಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದ್ದರೂ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ದಿನಬಳಕೆ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ಭಾರಿ ವಾಹನಗಳ ಸಂಚಾರವನ್ನು ಕೊಟ್ಟಿಗೆಹಾರದಿಂದ ಚಾರ್ಮಾಡಿವರೆಗೂ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೊಟ್ಟಿಗೆಹಾರ-ಕಳಸ-ಕುದುರೆಮುಖ-ಎಸ್‌.ಕೆ.ಬಾರ್ಡರ್‌, ಕಾರ್ಕಳ ಮೂಲಕ ಬೆಂಗಳೂರು, ಮೈಸೂರಿಗೆ ಕೆಲವು ವೋಲ್ವೊ ಬಸ್‌ಗಳು ಸಂಚರಿಸುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ