ಆ್ಯಪ್ನಗರ

ಜಲಪಾತದ ಮುಂದೆ ಸೆಲ್ಫೀ ತೆಗೆದುಕೊಳ್ಳುವಾಗ ಇಬ್ಬರ ಸಾವು

ಸೆಲ್ಫಿ ತೆಗೆಯುವಾಗ ಇಬ್ಬರು ಪ್ರವಾಸಿಗರು ಚಾರ್ಮಾಡಿಘಾಟಿಯ ಆಲೆಖಾನ್ ಜಲಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ವಿಕ ಸುದ್ದಿಲೋಕ 18 Jul 2016, 4:25 pm
ಚಿಕ್ಕಮಗಳೂರು: ಸೆಲ್ಫಿ ತೆಗೆಯುವಾಗ ಇಬ್ಬರು ಪ್ರವಾಸಿಗರು ಚಾರ್ಮಾಡಿಘಾಟಿಯ ಆಲೆಖಾನ್ ಜಲಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
Vijaya Karnataka Web two died while taking selfie
ಜಲಪಾತದ ಮುಂದೆ ಸೆಲ್ಫೀ ತೆಗೆದುಕೊಳ್ಳುವಾಗ ಇಬ್ಬರ ಸಾವು


ಚಿತ್ರದುರ್ಗ ಜಿಲ್ಲೆಯ ಹನುಮಂತಪ್ಪ (34), ನಾಗಭೂಷಣ್ (38) ಮೃತಪಟ್ಟವರು. ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ವಿವಿಧೆಡೆ ಪ್ರವಾಸ ಮುಗಿಸಿಕೊಂಡು ವಾಪಸಾಗುತ್ತಿದ್ದ ಸಂದರ್ಭ ಇವರಿಬ್ಬರೂ ಆಲೆಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಆಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಬಸವರಾಜ, ನಾಗೇಶ್, ಹೊನ್ನೇಶ್ ಜತೆಯಲ್ಲಿದ್ದರು.



ಕೆಲವು ತಿಂಗಳ ಹಿಂದೆಯಷ್ಟೇ ಮೂಡಿಗೆರೆ ತಾಲೂಕಿನ ಒಬ್ಬ ಯುವಕ ಇದೇ ಸ್ಥಳದಲ್ಲಿ ಸೆಲ್ಫೀ ತೆಗೆದುಕೊಳ್ಳುವಾಗ ಬಿದ್ದು ಮೃತಪಟ್ಟಿದ್ದ. ಎರಡು ತಿಂಗಳ ಹಿಂದೆ ಮತ್ತೊಬ್ಬ ಯುವಕನೂ ಇಂಥದ್ದೇ ಅವಘಡದಲ್ಲಿ ಗಾಯಗೊಂಡಿದ್ದ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ