ಆ್ಯಪ್ನಗರ

ಡಿಸಿ ಕಾರಿಗೆ ವಿಎ ಕಾರು ಡಿಕ್ಕಿ

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳು ಮತ್ತು ನೆರೆ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 18 Aug 2019, 5:00 am
ಕೊಟ್ಟಿಗೆಹಾರ: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳು ಮತ್ತು ನೆರೆ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web CKM-17KTG7


ಅತಿವೃಷ್ಟಿಯಿಂದ ಮನೆ ಕಳೆದುಕೊಂಡು ನೆರೆ ಪರಿಹಾರ ಕೇಂದ್ರದಲ್ಲಿ ಬೀಡು ಬಿಟ್ಟಿರುವ ನಿರಾಶ್ರಿತರನ್ನು ಮಾತನಾಡಿಸಿ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು ಅತಿವೃಷ್ಟಿಯಿಂದ ಬಾರಿ ಪ್ರಮಾಣದ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕಾರ್ಯ ಪ್ರಾರಂಭವಾಗಿದೆ. ನೆರೆ ಸಂತ್ರಸ್ತರಿಗೆ ನೆರೆವಾಗಿ ಅಧಿಕಾರಿಗಳೆ ಮನೆ ಬಾಗಿಲಿಗೆ ಬಂದು ಹಾನಿಯ ಮಾಹಿತಿ ಕಲೆ ಹಾಕಲಿದ್ದಾರೆ. ನೆರೆ ಸಂತ್ರಸ್ತರಿಗೆ ಯಾರಿಗೂ ಲೋಪವಾಗದಂತೆ ಪರಿಹಾರ ವಿತರಿಸಲಾಗುವುದು ಎಂದರು.

ಕೊಟ್ಟಿಗೆಹಾರದಿಂದ ಜಾವಳಿಗೆ ಹೋಗುವ ಸಂದರ್ಭ ಜಾವಳಿ ಟೆಲಿಪೋನ್‌ ಎಕ್ಸೆಂಜ್‌ ಸಮೀಪ ಜಿಲ್ಲಾಧಿಕಾರಿಗಳ ಕಾರಿಗೆ ಅರಮನೆ ತಳಗೂರು ಗ್ರಾಮ ಲೆಕ್ಕಾಧಿಕಾರಿ ಗಿರೀಶ್‌ ಅವರ ಕಾರು ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿಗಳ ಕಾರು ಜಖಂಗೊಂಡಿದ್ದು ಯಾವುದೆ ಅನಾಹುತ ಸಂಭವಿಸಿಲ್ಲ. ನಂತರ ಜಿಲ್ಲಾಧಿಕಾರಿಗಳು ಮಲೆಮನೆ ಗ್ರಾಮದ ಹಾನಿಯಾದ ಮನೆಗಳಿಗೆ ಬೇಟಿಕೊಟ್ಟು ಗ್ರಾಮಸ್ಥರಿಗೆ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ