ಆ್ಯಪ್ನಗರ

ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ವಾಸದ ಮನೆಯನ್ನು 94ಸಿ ಅಡಿಯಲ್ಲಿ ಸಕ್ರಮ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಓಂಕಾರಪ್ಪ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Vijaya Karnataka 28 Dec 2018, 5:00 am
ಚಿಕ್ಕಮಗಳೂರು :ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ವಾಸದ ಮನೆಯನ್ನು 94ಸಿ ಅಡಿಯಲ್ಲಿ ಸಕ್ರಮ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಓಂಕಾರಪ್ಪ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Vijaya Karnataka Web village accounts acb balaga
ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ


ತಾಲೂಕಿನ ಕರ್ತಿಕೆರೆ ಗ್ರಾಮದ ದಶರಥರಾಜ ಅರಸ್‌ ಅವರು ಗ್ರಾಮದ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಸರಕಾರಿ ಆದೇಶದಂತೆ 94ಸಿ ಅಡಿಯಲ್ಲಿ ಮನೆಯನ್ನು ಸಕ್ರಮ ಮಾಡಿಕೊಡಲು ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಕರ್ತಿಕೆರೆ ವೃತ್ತ ಗ್ರಾಮಲೆಕ್ಕಾಧಿಕಾರಿ ಓಂಕಾರಪ್ಪ ಅವರು 94ಸಿ ಅಡಿಯಲ್ಲಿ ಮನೆ ಮಂಜೂರಾತಿ ಮಾಡಿಸಿಕೊಡಲು ದಶರಥರಾಜ್‌ ಅರಸ್‌ ಅವರಲ್ಲಿ 15 ಸಾವಿರ ರೂ. ಲಂಚದ ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ದಶರಥರಾಜ ಅರಸ್‌ ಅವರು ಡಿ.26ರಂದು ಎಸಿಬಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ಡಿ.27ರಂದು ತಾಲೂಕು ಕಚೇರಿಯಲ್ಲಿ ದಶರಥರಾಜ್‌ ಅರಸ್‌ ಅವರಿಂದ 15 ಸಾವಿರ ರೂ.ಗಳನ್ನು ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಓಂಕಾರಪ್ಪ ಅವರನ್ನು ಬಂಧಿಸಿ ಹಣ ವಶಪಡಿಸಿಕೊಂಡಿದ್ದಾರೆ. ಮಂಗಳೂರು ಪಶ್ಚಿಮ ವಲಯ ಪೊಲೀಸ್‌ ಅಧೀಕ್ಷಕಿ ಶೃತಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗೇಶ್‌ಶೆಟ್ಟಿ, ನಿರೀಕ್ಷಕ ಕೃಷ್ಣಮೂರ್ತಿ ನೇತೃತ್ವ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ