ಆ್ಯಪ್ನಗರ

ಡಿಕೆಶಿ ಮಗಳ ಮದುವೆ ವ್ಯಾಲಂಟೈನ್ ಡೇಗೆ ಆಗಲೆಂದು ತಮಾಷೆ ಮಾಡಿದ್ದೇ, ಈಗ ಅದೇ ಮದುವೆ ಆಗುತ್ತಿದೆ

ಡಿಕೆ ಶಿವಕುಮಾರ್‌ ಅವರು ರಂಭಾಪುರಿ ಶ್ರೀಗಳ ಮಠಕ್ಕೆ ತೆರಳಿ ಮದುವೆಯ ಕರೆಯೋಲೆ ನೀಡಿದರು. ನಂತರ ಗೌರಿಗದ್ದೆಯಿಂದ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆದ ಡಿಕೆ ಶಿವಕುಮಾರ್‌ ಅವರು ಗುರುಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

Vijaya Karnataka Web 26 Jan 2021, 5:21 pm

ಹೈಲೈಟ್ಸ್‌:

  • ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಟೆಂಪಲ್‌ ರನ್‌
  • ಪುತ್ರಿಯ ವಿವಾಹ ಸಿದ್ಧತೆಯಲ್ಲಿ ಬ್ಯುಸಿ
  • ಗುರುಗಳು, ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಡಿಕೆಶಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ವಿನಯ್‌ ಗುರೂಜಿ
ವಿನಯ್‌ ಗುರೂಜಿ
ಚಿಕ್ಕಮಗಳೂರು: ಡಿಕೆ ಶಿವಕುಮಾರ್‌ ಮಗಳ ಮದುವೆ ವ್ಯಾಲಂಟೈನ್ ಡೇಗೆ ಆಗಲೆಂದು ತಮಾಷೆ ಮಾಡಿದ್ದೆ. ಈಗ ಅದೇ ವ್ಯಾಲಂಟೈನ್ ಡೇ ದಿನ ಮದುವೆಯಾಗುತ್ತಿದೆ.... ಇದು ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ನೀಡಿರುವ ಹೇಳಿಕೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಮಗಳ ಮದುವೆಗೆ ಕರೆಯೋಲೆ ನೀಡಲು ಬಂದಿದ್ದರು ಎಂದರು.

ನನಗೆ ಎರಡು ಕುಟುಂಬದ ಜತೆಯೂ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ಬರಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರೂ ತುಂಬಾ ಚೆನ್ನಾಗಿ ಇರುತ್ತಾರೆ ಎಂದು ವಿನಯ್‌ ಗುರೂಜಿ ತಿಳಿಸಿದರು.

ಸಿದ್ದಾರ್ಥ ಅವರು ಎಲ್ಲೆ ಇದ್ದರೂ ಸೂಕ್ಷ್ಮ ಶರೀರದಲ್ಲಿ ಇರುತ್ತಾರೆ. ಅವರು ಮಕ್ಕಳ ಮದುವೆ ಕಂಡು ಅಲ್ಲಿಂದಲೇ ಖುಷಿ ಪಡುತ್ತಾರೆ ಎಂದು ವಿನಯ್‌ ಗುರೂಜಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಡಿಕೆ ಶಿವಕುಮಾರ್‌ ಅವರು ರಂಭಾಪುರಿ ಶ್ರೀಗಳ ಮಠಕ್ಕೆ ತೆರಳಿ ಮದುವೆಯ ಕರೆಯೋಲೆ ನೀಡಿದರು.

ನಂತರ ಗೌರಿ ಗದ್ದೆಯಿಂದ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆದ ಡಿಕೆ ಶಿವಕುಮಾರ್‌ ಅವರು ಗುರುಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ