ಆ್ಯಪ್ನಗರ

ಸರಕಾರ ಬೀಳುವುದನ್ನೇ ಕಾಯುತ್ತಿದ್ದೇವೆ: ಸಿ ಟಿ ರವಿ

ಸರಕಾರ ಬೀಳಿಸುವುದು ನಮ್ಮ ಕೆಲಸವಲ್ಲ. ಸರಕಾರ ಉಳಿಸಿಕೊಳ್ಳುವುದು ಅವರ ಕೆಲಸ. ಸರಕಾರ ಯಾವಾಗ ಬೀಳುತ್ತದೆ ಎಂದು ನಾವು ಕಾಯುತ್ತಿದ್ದೇವೆ ಅಷ್ಟೇ ಎಂದು ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ.ರವಿ ಹೇಳಿದರು.

Vijaya Karnataka 2 Jul 2019, 5:00 am
ಚಿಕ್ಕಮಗಳೂರು : ಸರಕಾರ ಬೀಳಿಸುವುದು ನಮ್ಮ ಕೆಲಸವಲ್ಲ. ಸರಕಾರ ಉಳಿಸಿಕೊಳ್ಳುವುದು ಅವರ ಕೆಲಸ. ಸರಕಾರ ಯಾವಾಗ ಬೀಳುತ್ತದೆ ಎಂದು ನಾವು ಕಾಯುತ್ತಿದ್ದೇವೆ ಅಷ್ಟೇ ಎಂದು ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ.ರವಿ ಹೇಳಿದರು.
Vijaya Karnataka Web waiting for the government to fall ct ravi
ಸರಕಾರ ಬೀಳುವುದನ್ನೇ ಕಾಯುತ್ತಿದ್ದೇವೆ: ಸಿ ಟಿ ರವಿ


ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸರಕಾರ ಬೀಳಿಸುವ ನಿಟ್ಟಿನಲ್ಲಿ ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ನಾವು ಹಗಲುಗನಸು ಕಾಣುವ ಜನರೂ ಅಲ್ಲ. ನಾವು ಕನಸು ನನಸು ಮಾಡುವ ಜನ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ಗೆ ತಿರುಗೇಟು ನೀಡಿದರು.

ಸರಕಾರ ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಿರುವುದನ್ನು ಶಾಸಕ ಆನಂದ್‌ಸಿಂಗ್‌ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರಬಹುದು ಅಥವಾ ರಾಜಕೀಯ ಕಾರಣವೂ ಇರಬಹುದು. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಕಾಂಗ್ರೆಸ್‌ ಈಗ ಹತಾಶ ಸ್ಥಿತಿಯಲ್ಲಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಭವಿಷ್ಯ ಇಲ್ಲವೆನಿಸಿದ್ದರೆ ಅದು ಅವರ ತೀರ್ಮಾನ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರೇ ಯಾವುದೇ ಭವಿಷ್ಯ ಇಲ್ಲದೆ ಹತಾಶೆಯಲ್ಲಿದ್ದಾರೆ. ಹೀಗಾಗಿ ಬೇರೆ ನಾಯಕರಿಗೂ ಇಲ್ಲಿದ್ದರೆ ಉದ್ಧಾರ ಆಗುವುದಿಲ್ಲ ಎನಿಸಿರಬಹುದು. ಈ ಕಾರಣಕ್ಕಾಗಿ ರಾಜೀನಾಮೆ ಕೊಡುತ್ತಿರಬಹುದು ಎಂದು ವಿಶ್ಲೇಷಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ