ಆ್ಯಪ್ನಗರ

ಕಾಡುಕೋಣ ದಾಳಿ, ಗಂಭೀರ ಗಾಯ

ಬಿಳುಗೂರು ಗ್ರಾಮ ವ್ಯಾಪ್ತಿಯ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡು ಕೋಣ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ.

Vijaya Karnataka 15 Jun 2019, 5:00 am
ಕಳಸ : ಬಿಳುಗೂರು ಗ್ರಾಮ ವ್ಯಾಪ್ತಿಯ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡು ಕೋಣ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ.
Vijaya Karnataka Web CKM-14kls1


ಬಿಳುಗೂರಿನ ಚನ್ನಪ್ಪ(35) ಗಾಯಗೊಂಡವರು.

ಚನ್ನಪ್ಪ ಅವರು ಬಿಳುಗೂರಿನ ಶ್ಯಾಮ ಶೆಟ್ಟಿ ಅವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಫಿ ಗಿಡದ ಮಧ್ಯೆ ಇದ್ದ ಕಾಡು ಕೋಣ ಏಕಾಏಕಿ ದಾಳಿ ಮಾಡಿದೆ. ತನ್ನ ಕೊಂಬುಗಳಿಂದ ಚನ್ನಪ್ಪ ಅವರ ಕುತ್ತಿಗೆಗೆ ತಿವಿದು ಗಂಭೀರ ಗಾಯಗೊಳಿಸಿದೆ. ಗಾಯಾಳುವಿಗೆ ಕೂಡಲೇ ಬಾಳೆಹೊಳೆ, ಕಳಸ ಆಸ್ಪತ್ರೆಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಳಸ ಅರಣ್ಯ ಇಲಾಖೆ ಬೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ