ಆ್ಯಪ್ನಗರ

ವನ್ಯಜೀವಿ ಸಪ್ತಾಹ, ಆನೆ ದಿಧಿನಾಧಿಚಧಿರಧಿಣೆ ಸಮಾರೋಪ

ಅರಣ್ಯ ಮತ್ತು ಪರಿಸರ ಕಾಪಾಡದಿದ್ದಲ್ಲಿ ಮುಂದಿನ ಪೀಳಿಗೆಗೆ ಪ್ರಾಣಿ, ಪಕ್ಷಿಗಳ ಚಿತ್ರವನ್ನು ಪಟದಲ್ಲಿ ತೋರಿಸುವ ಪರಿಸ್ಥಿತಿ ಬಂದೊದಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾಕೃಷ್ಣಪ್ಪ ಹೇಳಿದರು.

Vijaya Karnataka 20 Nov 2018, 5:00 am
ಚಿಕ್ಕಮಗಳೂರು : ಅರಣ್ಯ ಮತ್ತು ಪರಿಸರ ಕಾಪಾಡದಿದ್ದಲ್ಲಿ ಮುಂದಿನ ಪೀಳಿಗೆಗೆ ಪ್ರಾಣಿ, ಪಕ್ಷಿಗಳ ಚಿತ್ರವನ್ನು ಪಟದಲ್ಲಿ ತೋರಿಸುವ ಪರಿಸ್ಥಿತಿ ಬಂದೊದಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾಕೃಷ್ಣಪ್ಪ ಹೇಳಿದರು.
Vijaya Karnataka Web CKM-19rudrap6


ಅರಣ್ಯ ಇಲಾಖೆ, ಭದ್ರಾ ಹುಲಿ ಯೋಜನೆ, ಶಿಕ್ಷ ಣ ಇಲಾಖೆ, ವಿದ್ಯಾಸಂಸ್ಥೆಗಳು ಹಾಗೂ ಪರಿಸರ ಅಭಿವೃದ್ಧಿ ಸಮಿತಿಗಳ ಸಹಯೋಗದೊಂದಿಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ 64ನೇ ವನ್ಯಜೀವಿ ಸಪ್ತಾಹ ಮತ್ತು ಆನೆ ದಿನಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಪರಿಸರ ಮತ್ತು ಅರಣ್ಯ ವಿನಾಶದತ್ತ ಸಾಗುತ್ತಿದೆ. ಈಗಲೆ ಎಚ್ಚೆತ್ತು ಪರಿಸರ, ಅರಣ್ಯ ಮತ್ತು ವನ್ಯಜೀವಿಗಳನ್ನು ಉಳಿಸುವತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ನಮ್ಮ ಮುಂದಿನ ಪೀಳಿಗೆಗೆ ಇವುಗಳನ್ನು ನೋಡುವ ಅವಕಾಶವೇ ಇಲ್ಲದಂತಾಗುತ್ತದೆ. ಅವರು ನಮ್ಮನ್ನು ಶಪಿಸುತ್ತಾರೆ ಎಂದರು.

ಜಿಲ್ಲೆಯಲ್ಲಿ ಇಂದು ವಿಶ್ವ ಶೌಚಾಲಯ ದಿವಸ ಕಾರ್ಯಕ್ರಮ ನಡೆಸಲಾಗಿದೆ. ಇದೇ ದಿನ ವಿಶ್ವ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭವೂ ನಡೆದಿದೆ. ಎರಡೂ ಅತ್ಯಂತ ವಿಶಿಷ್ಟ ಹಾಗೂ ಅಗತ್ಯವಾಗಿ ನಡೆಸಬೇಕಾದ ಕಾರ್ಯಕ್ರಮಗಳಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ಕರೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಕನಸೂ ಇದೇ ಆಗಿತ್ತು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಿ ಸ್ವಚ್ಛ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ಜಯಣ್ಣ ಸಮಾರಂಭದ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಸರ್ವೋಚ್ಛ ನ್ಯಾಯಾಲಯದ ಹಲವು ತೀರ್ಪುಗಳಿಂದಾಗಿ ಇಂದು ಅರಣ್ಯ ಉಳಿಯಲು ಸಾಧ್ಯವಾಗಿದೆ ಎಂದರು.

ಭದ್ರಾ ವನ್ಯಜೀವಿ ವಿಭಾಗದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಲಾಗಿದೆ. ಕೃಷಿ ಹೊಂಡಗಳನ್ನು ನಿರ್ಮಿಸಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಂಡಿರುವ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಭದ್ರಾ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷ ಣಾಧಿಕಾರಿ ಎಸ್‌.ಧನಂಜಯ, ವನ್ಯಜೀವಿ ಪರಿಪಾಲಕ ಮಹೇಂದ್ರ ಕುಮಾರ್‌ ಜೈನ್‌, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಆರ್‌.ವಿ.ಹೆಗಡೆ, ಕೆ.ಆರ್‌.ಸತೀಶ್‌ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಕಚೇರಿಯಿಂದ ವಿವಿಧ ಶಾಲೆ ಕಾಲೇಜು ವಿದ್ಯಾರ್ಥಿಗಳು ಪರಿಸರ ಜಾಗೃತಿ ಜಾಥಾ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ