ಆ್ಯಪ್ನಗರ

ವಿದ್ಯುತ್‌ ತಂತಿ ತುಂಡಾಗಿ ಮಹಿಳೆ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮಳಲೂರಿನಲ್ಲಿ ಶನಿವಾರ ನಡೆದಿದೆ.

Vijaya Karnataka 24 Jun 2019, 5:00 am
ಚಿಕ್ಕಮಗಳೂರು : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮಳಲೂರಿನಲ್ಲಿ ಶನಿವಾರ ನಡೆದಿದೆ.
Vijaya Karnataka Web woman dies after being electrocuted
ವಿದ್ಯುತ್‌ ತಂತಿ ತುಂಡಾಗಿ ಮಹಿಳೆ ಸಾವು


ಕೂಲಿ ಕಾರ್ಮಿಕರಾದ ನೀಲಮ್ಮ (45)ಮೃತಪಟ್ಟವರು. ಇವರಿಗೆ ಪತಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.

ಪಡಿತರ ಧಾನ್ಯ ತರಲು ನ್ಯಾಯಬೆಲೆ ಅಂಗಡಿಗೆ ಹೋಗಿದ್ದ ನೀಲಮ್ಮ ಬರುವಾಗ ರಸ್ತೆ ಬದಿಯಲ್ಲಿದ್ದ ಖಾಸಗಿ ವ್ಯಕ್ತಿಯೊಬ್ಬರ ಕೈತೋಟದಲ್ಲಿದ್ದ ಸೀಬೆ ಮರದಲ್ಲಿ ಸೀಬೆ ಹಣ್ಣು ಕೊಯ್ಯಲು ಯತ್ನಿಸಿದ್ದಾರೆ. ಕೊಂಬೆಯ ಸೊಪ್ಪಿನ ಮರೆಯಲ್ಲಿ ಹರಿದು ಜೋತು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೆಸ್ಕಾಂ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದ್ದು ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಗಳು ಆಗ್ರಹಿಸಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ