ಆ್ಯಪ್ನಗರ

ಮರ ಬಿದ್ದು ಮಹಿಳೆ ಸಾವು

ತೋಟದ ಕೆಲಸದಲ್ಲಿ ತೊಡಗಿರುವಾಗ ಆಕಸ್ಮಿಕವಾಗಿ ಮರ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕೊಪ್ಪ ತಾಲೂಕು ಅತ್ತಿಕೊಡಿಗೆ ಗ್ರಾ.ಪಂ. ವ್ಯಾಪ್ತಿಯ ತೋಟದಮನೆ¿åಲ್ಲಿ ಶನಿವಾರ ನಡೆದಿದೆ.

Vijaya Karnataka 14 Jul 2019, 5:00 am
ಜಯಪುರ : ತೋಟದ ಕೆಲಸದಲ್ಲಿ ತೊಡಗಿರುವಾಗ ಆಕಸ್ಮಿಕವಾಗಿ ಮರ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕೊಪ್ಪ ತಾಲೂಕು ಅತ್ತಿಕೊಡಿಗೆ ಗ್ರಾ.ಪಂ. ವ್ಯಾಪ್ತಿಯ ತೋಟದಮನೆ¿åಲ್ಲಿ ಶನಿವಾರ ನಡೆದಿದೆ.
Vijaya Karnataka Web woman dies after falling tree
ಮರ ಬಿದ್ದು ಮಹಿಳೆ ಸಾವು


ಬಿಳಾಲುಕೊಪ್ಪ ಸೈಟ್‌ನ ಸುಮಿತ್ರ (45) ಮೃತಪಟ್ಟವರು. ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರನೆ ಪಕ್ಕದ ಸರಕಾರಿ ಜಾಗದಲ್ಲಿದ್ದ ಹಳೆಯದಾದ ಮರವೊಂದು ಮಹಿಳೆಯ ಬಲಗಾಲು, ಭುಜ ಹಾಗೂ ತಲೆಯ ಭಾಗಕ್ಕೆ ಬಿದ್ದು ಒಳಪೆಟ್ಟಿನ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಪತಿ ಸಂಜೀವ ಪೂಜಾರಿ ಜಯಪುರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಅತ್ತಿಕೊಡಿಗೆ ಗ್ರಾ.ಪಂ. ಅಧ್ಯಕ್ಷ ಬಿ.ಆರ್‌.ವೆಂಕಟಕೃಷ್ಣ ಹೆಬ್ಬಾರ್‌, ಕಾಂಗ್ರೆಸ್‌ ಮುಖಂಡ ಎಚ್‌.ಎಂ.ಸತೀಶ್‌, ಬಿಳಾಲುಕೊಪ್ಪ ಜೇಸಿ ಮಾಜಿ ಅಧ್ಯಕ್ಷ ಶ್ರೇಣಿಕ್‌ ಜೈನ್‌, ತೋಟ ಮಾಲೀಕ ವಿಷ್ಣುಮೂರ್ತಿ ಮತ್ತಿತರರು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ