ಆ್ಯಪ್ನಗರ

ಮಹಿಳಾ ಆರೋಗ್ಯಕ್ಕೆ ಬೇಕು ನಿಗದಿತ ತಪಾಸಣೆ (ಇಂದೇ ಬಳಸಿ)

ಮಹಿಳೆಯರು ಯಾವುದೇ ಮುಜುಗರಕ್ಕೆ ಒಳಗಾಗದೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಸ್ತನ ಕ್ಯಾನ್ಸರ್‌ ಮತ್ತಿತರೆ ಮಾರಕ ರೋಗದಿಂದ ದೂರ ಇರಬಹುದು ಎಂದು ಪ್ರಸೂತಿ ತಜ್ಞೆ ಡಾ.ಜ್ಯೋತಿಕೃಷ್ಣೇಗೌಡ ಹೇಳಿದರು.

Vijaya Karnataka 27 Jul 2019, 6:39 pm
ಚಿಕ್ಕಮಗಳೂರು: ಮಹಿಳೆಯರು ಯಾವುದೇ ಮುಜುಗರಕ್ಕೆ ಒಳಗಾಗದೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಸ್ತನ ಕ್ಯಾನ್ಸರ್‌ ಮತ್ತಿತರೆ ಮಾರಕ ರೋಗದಿಂದ ದೂರ ಇರಬಹುದು ಎಂದು ಪ್ರಸೂತಿ ತಜ್ಞೆ ಡಾ.ಜ್ಯೋತಿಕೃಷ್ಣೇಗೌಡ ಹೇಳಿದರು.
Vijaya Karnataka Web CKM-26SHIVU-P1


ನಗರದ ಶ್ರೀಲಕ್ಷ್ಮಿ ಮೆಡಿಕೇರ್‌ ಸಭಾಂಗಣದಲ್ಲಿ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಸಹ್ಯಾದ್ರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಉಚಿತ ಸ್ತನ ಕ್ಯಾನ್ಸರ್‌ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಜತೆಗೆ ಪೌಷ್ಟಿಕಾಂಶದ ಆಹಾರ ತೆಗೆದುಕೊಳ್ಳಬೇಕು. ಯಾವುದೆ ಆರೋಗ್ಯ ಸಮಸ್ಯೆ ಇದ್ದರೂ ಮುಜುಗರಪಟ್ಟುಕೊಳ್ಳದೆ ವೈದ್ಯರ ಬಳಿ ತಪಾಸಣೆ ಮಾಡಿಕೊಂಡು ಪ್ರಾರಂಭದಲ್ಲಿಯೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.

45 ವರ್ಷದ ನಂತರ ಪ್ರತಿಯೊಬ್ಬ ಮಹಿಳೆಯರು ಸ್ತನ ಕ್ಯಾನ್ಸರ್‌ ತಪಾಸಣೆ ಮಾಡಿಸಿಕೊಳ್ಳಬೇಕು. 50 ವರ್ಷದ ನಂತರ ಪ್ರತಿ 2 ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಂಡಾಗ ಏನಾದರು ಸಮಸ್ಯೆ ಇದ್ದಲ್ಲಿ ತಕ್ಷ ಣ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿರಬಹುದು ಎಂದರು.

ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ.ರಾಘವೇಂದ್ರ ಭಟ್‌ ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರಿಗೆ ಗರ್ಭಕೋಶದ ಸಮಸ್ಯೆ ಮತ್ತು ಸ್ತನ ಕ್ಯಾನ್ಸರ್‌ ಹೆಚ್ಚಾಗುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದೆ ನಿಲ್ರ್ಯಕ್ಷ್ಯ ಮಾಡುವುದೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಮಕ್ಕಳಿಗೆ ಸರಿಯಾಗಿ ಎದೆ ಹಾಲು ನೀಡದೆ ಇರುವುದರಿಂದಲೂ ಸ್ತನ ಕ್ಯಾನ್ಸರ್‌ ಬರುತ್ತದೆ. ಆರೋಗ್ಯದ ಬಗ್ಗೆ ಮಹಿಳೆಯರು ಹೆಚ್ಚು ಜಾಗೃತಿ ವಹಿಸಬೇಕು ಎಂದರು.

ಜಿಲ್ಲಾ ಪ್ರಸೂತಿ ತಜ್ಞ ವೈದ್ಯರ ಸಂಘದ ಕಾರ್ಯದರ್ಶಿ ಡಾ.ಶಿವಕುಮಾರ್‌ ಮಾತನಾಡಿ, ನಮ್ಮ ಆಸ್ಪತ್ರೆಯಿಂದ ಉಚಿತವಾಗಿ ಮಹಿಳಾ ಸ್ತನ ಕ್ಯಾನ್ಸರ್‌ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು 40ಕ್ಕೂ ಹೆಚ್ಚು ಮಹಿಳೆಯರು ಈಗಾಗಲೆ ತಮ್ಮ ಹೆಸರು ನೊಂದಾಯಿಸಿಕೊಂಡಿದ್ದಾರೆ. ನನ್ನ ಜತೆಗೆ ಪ್ರಸೂತಿ ತಜ್ಞ ವೈದ್ಯರ ಸಂಘವು ಸಹ ಸಹಕರಿಸಿದೆ ಎಂದರು. ಈ ಸಂದರ್ಭ ಜಿಲ್ಲಾ ಪ್ರಸೂತಿ ತಜ್ಞ ವೈದ್ಯರ ಸಂಘದ ಅಧ್ಯಕ್ಷ ಡಾ.ಚಂದ್ರಶೇಖರ್‌, ಡಾ.ನಂದಾಸುಂದರೇಶ್‌, ಡಾ.ಕಲ್ಪನಾ, ಡಾ.ಮೀರಾ, ಡಾ.ಛಾಯಾ, ಡಾ.ಲೋಹಿತ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ