ಆ್ಯಪ್ನಗರ

ಜಿಲ್ಲಾಡಳಿತದಿಂದ ವಿಶ್ವ ಪರಿಸರ ದಿನಾಚರಣೆ

ಹಿರಿಯರು ನೆಟ್ಟ ಗಿಡದಿಂದ ನಾವು ಇಂದು ಫಲ ಪಡೆಯುತ್ತಿದ್ದೇವೆ. ಪ್ರತಿಯೊಬ್ಬರು ಒಂದು ಗಿಡ ನೆಟ್ಟು ನಮ್ಮ ಮುಂದಿನ ಪೀಳಿಗೆ ಅದರ ಫಲ ಅನುಭವಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಮೇಶ್‌ ಎಂ ಅಡಿಗ ಹೇಳಿದರು.

Vijaya Karnataka 19 Jun 2019, 5:00 am
ಚಿಕ್ಕಮಗಳೂರು : ಹಿರಿಯರು ನೆಟ್ಟ ಗಿಡದಿಂದ ನಾವು ಇಂದು ಫಲ ಪಡೆಯುತ್ತಿದ್ದೇವೆ. ಪ್ರತಿಯೊಬ್ಬರು ಒಂದು ಗಿಡ ನೆಟ್ಟು ನಮ್ಮ ಮುಂದಿನ ಪೀಳಿಗೆ ಅದರ ಫಲ ಅನುಭವಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಮೇಶ್‌ ಎಂ ಅಡಿಗ ಹೇಳಿದರು.
Vijaya Karnataka Web CKM-18RUDRAP4


ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನ ಉದ್ಘಾಟಿಸಿ ಮಾತನಾಡಿದರು.

ಮನುಷ್ಯನ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದೆ. ಅವಕಾಶ ಸಿಕ್ಕಾಗ ಪ್ರತಿಯೊಬ್ಬರೂ ಗಿಡನೆಟ್ಟು ಅದನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಬೇಕು ಎಂದರು.

ಹಿಂದಿನ ಕಾಲದಲ್ಲಿ ಕೆರೆ, ಕಟ್ಟೆ, ಬಾವಿ ನೀರನ್ನು ಸೇವಿಸುತ್ತಿದ್ದೆವು. ಆದರೆ, ಇಂದಿನ ಕಲುಷಿತ ವಾತಾವರಣದಿಂದ ಕೆರೆ ಕಟ್ಟೆ ನೀರು ಮಲೀನಗೊಂಡಿದೆ. ಪ್ರಸ್ತುತ ಯಂತ್ರಗಳಿಂದ ಶುದ್ಧೀಕರಿಸಿದ ನೀರನ್ನು ಸೇವಿಸುವ ಮಟ್ಟಕ್ಕೆ ತಲುಪಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ವಾಯುಮಾಲಿನ್ಯ ರಾಜಧಾನಿ ದಿಲ್ಲಿಯಲ್ಲಿ ಕಂಡು ಬರುತ್ತಿದ್ದು ಇದರಿಂದ ಶ್ವಾಸಕೋಶ, ಉಸಿರಾಟದ ತೊಂದರೆ, ಹೃದಯ ರೋಗ ಹಾಗೂ ಕ್ಯಾನ್ಸರ್‌ ನಂತಹ ಕಾಯಿಲೆಗಳಿಗೆ ಆಹಾರವಾಗುತ್ತಿದ್ದೇವೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶ ಬಸವರಾಜ ಚೇಂಗಟಿ ಮಾತನಾಡಿ, ಪರಿಸರ ದಿನಾಚರಣೆಯನ್ನು ಪ್ರಾಯೋಗಿಕವಾಗಿ ಮಾಡಿದರೆ ಮಾತ್ರ ಯಶಸ್ವಿಯಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಿಗಿಂತ ಈ ಜಿಲ್ಲೆಯಲ್ಲಿ ಅತೀ ಹೆಚ್ಚು ಯೋಗ್ಯವಾದ ಆಮ್ಲಜನಕ ದೊರಕುತ್ತಿರುವುದು ಸಂತೋಷದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದರು.

ಪರಿಸರ ಸಂರಕ್ಷ ಣೆ ಬಗ್ಗೆ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಹಾಗೂ ಚಿತ್ರ ಕಲೆ ಸ್ಪರ್ಧೆ ಏರ್ಪಡಿಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪರಿಸರ ಅಧಿಕಾರಿ ಪ್ರಕಾಶ್‌ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌, ಅರಣ್ಯ ಇಲಾಖೆಯ ಸಹಾಯಕ ಉಪ ನಿರ್ದೇಶಕ ಮುದ್ದಣ್ಣ, ಸಾರ್ವಜನಿಕ ಶಿಕ್ಷ ಣ ಇಲಾಖೆಯ ಉಪನಿರ್ದೇಶಕ ನಂಜಯ್ಯ, ಕ್ಷೇತ್ರ ಶಿಕ್ಷಾಣಾಧಿಕಾರಿ ಬಿ.ಎಲ್‌.ಶರತ್‌ಚಂದ್ರ, ಜಿಲ್ಲಾ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ