ಆ್ಯಪ್ನಗರ

ಚಿಕ್ಕಮಗಳೂರು ಎಸ್‌ಪಿ ವಿರುದ್ಧ ಸಿಎಂ ಗರಂ: ಮಾಧ್ಯಮದವರಿಗೆ ಕ್ಷಮೆ ಕೋರಿದ ಬಿಎಸ್‌ವೈ

ಮಾಧ್ಯಮದವರಿಗೆ ಅಡ್ಡಿಪಡಿಸಿದ ಪೊಲೀಸ್‌ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಅಲ್ಲದೆ, ಮಾಧ್ಯಮದವರಿಗೆ ಅಡ್ಡಿಪಡಿಸಿದ ಅಧಿಕಾರಿಗಳು ಯಾವುದೇ ಉನ್ನತ ಹುದ್ದೆಯಲ್ಲಿದ್ದರೂ ಕ್ರಮ ಜರುಗಿಸುತ್ತೇನೆ. ಅವರಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದು ಕ್ಷಮೆ ಕೇಳಿದರು.

Vijaya Karnataka Web 14 Jan 2020, 3:23 pm
ಚಿಕ್ಕಮಗಳೂರು: ಮಾಧ್ಯಮದವರ ಜತೆ ದುರ್ವರ್ತನೆ ತೋರಿದ ಪೊಲೀಸ್‌ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಸಿಎಂ ಬಿಎಸ್‌ವೈ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
Vijaya Karnataka Web yediyurappa ckm vk


ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಸೊಲ್ಲಾಪುರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವೇಳೆ ಪೊಲೀಸ್‌ ಸಿಬ್ಬಂದಿ ಮಾಧ್ಯಮದವರಿಗೆ ಅಡ್ಡಿಪಡಿಸಿದರು. ಇದಕ್ಕೆ ಗರಂ ಆದ ಸಿಎಂ ಯಡಿಯೂರಪ್ಪ, ನಿನ್ನನ್ನ ಅಮಾನತಿನಲ್ಲಿ ಇಡಬೇಕಾಗುತ್ತದೆ ಎಂದು ಗುಡುಗಿದ್ದಾರೆ.

ಅಲ್ಲದೆ, ಮಾಧ್ಯಮದವರ ಒಳಬಿಡೋದಕ್ಕೆ ನಿಮಗೇನು ಸಮಸ್ಯೆ. ಮೊದಲು ನಿಮ್ಮ ವರ್ತನೆಯನ್ನ ಸರಿಮಾಡಿಕೊಳ್ಳಿ ಎಂದು ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆಗೆ ಸಿಎಂ ಯಡಿಯೂರಪ್ಪ ಅಡ್ಡಿಪಡಿಸಿದ್ದಾರೆ.

ಸಿಎಂ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ಗೆ ಪರಿಶೀಲನೆ

ಜತೆಗೆ, ಮಾಧ್ಯಮದವರಿಗೆ ಅಡ್ಡಿಪಡಿಸಿದ ಅಧಿಕಾರಿಗಳು ಯಾವುದೇ ಉನ್ನತ ಹುದ್ದೆಯಲ್ಲಿದ್ದರೂ ಕ್ರಮ ಜರುಗಿಸುತ್ತೇನೆ. ಮಾಧ್ಯಮದವರು ದೌರ್ಜನ್ಯ ಸಹಿಸಿ ಸುದ್ದಿ ಸಂಗ್ರಹಿಸಲು ಕುಳಿತಿದ್ದಾರೆ. ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮದವರಿಗೆ ಎರಡೆರಡು ಬಾರಿ ಕ್ಷಮೆ ಕೇಳಿದರು.

'ನಾಳೆ ಬಾ' ಕತೆಯಾದ ಬಿಎಸ್‌ವೈ ದಿಲ್ಲಿ ಭೇಟಿ: ಇನ್ನೂ ನಿಗದಿಯಾಗದ ಸಿಎಂ - ಶಾ ಭೇಟಿ ದಿನಾಂಕ!

ಸೊಲ್ಲಾಪುರ ಗ್ರಾಮದಲ್ಲಿ ಮಂಗಳವಾರ ಗುರುಸಿದ್ದರಾಮ ಶಿವಯೋಗಿಗಳ 847ನೇ ಜಯಂತಿ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭಾಗವಹಿಸಿದ್ದರು. ಈ ವೇಳೆ, ಮಾಧ್ಯಮದವರಿಗೆ ದುರ್ವರ್ತನೆ ತೋರಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ.

ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಪಕ್ಷದ ಅಧ್ಯಕ್ಷರು ತೀರ್ಮಾನಿಸಲಿದ್ದಾರೆ: ಸಿಎಂ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ