ಆ್ಯಪ್ನಗರ

ಉಚಿತ ಬಸ್‌ ಎಲ್ಲ ಜಾತಿಯವರಿಗೂ ವಿಸ್ತರಿಸಿ

ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಿರುವ ಮಾದರಿಯಲ್ಲೇ ಎಲ್ಲ ಜಾತಿಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕು ಹಾಗೂ ಬೆಳಗ್ಗೆ ಎಂಟು ಗಂಟೆಗೆ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಬೇಕೆಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಆಗ್ರಹಿಸಿ ಎಬಿವಿಪಿಯಿಂದ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ವಿಕ ಸುದ್ದಿಲೋಕ 13 Jul 2017, 8:34 am
ಚಿತ್ರದುರ್ಗ : ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಿರುವ ಮಾದರಿಯಲ್ಲೇ ಎಲ್ಲ ಜಾತಿಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕು ಹಾಗೂ ಬೆಳಗ್ಗೆ ಎಂಟು ಗಂಟೆಗೆ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಬೇಕೆಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಆಗ್ರಹಿಸಿ ಎಬಿವಿಪಿಯಿಂದ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web
ಉಚಿತ ಬಸ್‌ ಎಲ್ಲ ಜಾತಿಯವರಿಗೂ ವಿಸ್ತರಿಸಿ


ನಗರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಮೆರವಣಿಗೆಯಲ್ಲಿ ಹೊರಟ ವಿದ್ಯಾರ್ಥಿಗಳು ಎಲ್ಲ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವಲ್ಲೂ ತಾರತಮ್ಯ ಮಾಡುತ್ತಿರುವ ರಾಜ್ಯ ಸರಕಾರದ ಕ್ರಮದ ವಿರುದ್ಧ ಘೋಷಣೆ ಕೂಗಿದರು. ಪರಿಶಿಷ್ಟ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ನೀಡಿರುವುದು ಅತ್ಯಂತ ಸ್ವಾಗತಾರ್ಹ. ಅದೇ ರೀತಿ ಉಳಿದ ಸಮುದಾಯ ವಿದ್ಯಾರ್ಥಿಗಳಿಗೂ ಬಸ್‌ ಪಾಸ್‌ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಸಮಯ ಬದಲಾವಣೆ ಬೇಡ : ಪದವಿ ಕಾಲೇಜುಗಳನ್ನು ಎಂಟು ಗಂಟೆಗೆ ಪ್ರಾರಂಭಿಸುವುದರಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹಾಗೂ ಹಾಸ್ಟಲ್‌ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ರಾಜ್ಯದಲ್ಲಿ ಬಹುತೇಕ ಪ್ರಥಮ ದರ್ಜೆ ಕಾಲೇಜುಗಳು ಪಪೂ ಕಾಲೇಜು ಕಟ್ಟಡಗಳಲ್ಲಿ ಪಾಳಿ ಪ್ರಕಾರ ನಡೆಯುತ್ತಿವೆ. ಸ್ವಂತ ಕಟ್ಟಡ, ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಈ ಸಮಸ್ಯೆ ಪರಿಹರಿಸದ ಸರಕಾರ ವೇಳಾಪಟ್ಟಿ ಬದಲಾವಣೆ ಮಾಡಿ ಸುಧಾರಣೆ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರ ಕೂಡಲೇ ಈ ಆದೇಶ ಹಿಂಪಡೆದು ಉಪನ್ಯಾಸಕರು, ವಿದ್ಯಾರ್ಥಿಗಳು ಅನುಕೂಲ ಮತ್ತು ವಾತಾವರಣಕ್ಕೆ ತಕ್ಕಂತೆ ಸಮಯ ನಿಗದಿಪಡಿಸುವ ಮುಕ್ತ ಸ್ವಾತಂತ್ರ್ಯ ಅಲ್ಲಿರುವ ಪ್ರಾಚಾರ್ಯರ ವಿವೇಚನೆಗೆ ಬಿಡಬೇಕು. ರಾಜ್ಯದಲ್ಲಿ ಬರಗಾಲ ಇರುವುದರಿಂದ ಎಲ್ಲ ಕೆಟಗರಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಬೇಕು. ಬಸ್‌ ಸೌಕರ್ಯ ಇಲ್ಲದ ಗ್ರಾಮೀಣ ಪ್ರದೇಶಕ್ಕೆ ಕೆಎಸ್‌ಆರ್‌ಟಿಸಿಯಿಂದ ಬಸ್‌ ಬಿಡಬೇಕು ಎಂದರು. ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಚಂದ್ರಶೇಖರ್‌, ರಾಜ್ಯ ಕಾರ‍್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್‌, ಪ್ರದೀಪ್‌, ಯೋಗೀಶ್‌, ಮಣಿಕಂಠ, ಹರೀಶ್‌, ಮಧು ಮತ್ತಿತತರು ಭಾಗವಹಿಸಿದ್ದರು.

--------------

ಹೊಸದುರ್ಗದಲ್ಲೂ ಪ್ರತಿಭಟನೆ :

ಹೊಸದುರ್ಗ: ರಾಜ್ಯ ಸರಕಾರ ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಿರುವ ಬಸ್‌ಪಾಸ್‌ ವ್ಯವಸ್ಥೆಯನ್ನು ಎಲ್ಲ ವಿದ್ಯಾರ್ಥಿಗಳಿಗೂ ವಿಸ್ತರಿಸುವುದರ ಜತೆಗೆ ಕಾಲೇಜು ಸಮಯವನ್ನು ಬದಲಿಸಿರುವುದನ್ನು ವಿರೋಧಿಸಿ ಎಬಿವಿಪಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ