ಆ್ಯಪ್ನಗರ

ಕವಿ ಸಿದ್ದಲಿಂಗಯ್ಯ ಸೇರಿ ನಾಲ್ವರಿಗೆ ಮುರುಘಾಶ್ರೀ ಪ್ರಶಸ್ತಿ

ಮುರುಘಾ ಮಠದ ಅನುಭವ ಮಂಟಪದಲ್ಲಿಶನಿವಾರ ಸಂಜೆ ಆಯೋಜಿಸಿದ್ದ ಸಾಹಸಿಗರ ಸಮಾವೇಶದಲ್ಲಿ ನಾನಾ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ನಾಡಿನ ಐವರು ಗಣ್ಯರಿಗೆ ಮುರುಘಾಶ್ರೀ ಹಾಗೂ ಭರಮಣ್ಣ ನಾಯಕ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

Vijaya Karnataka 6 Oct 2019, 9:04 pm
ಚಿತ್ರದುರ್ಗ: ಮುರುಘಾ ಮಠದ ಅನುಭವ ಮಂಟಪದಲ್ಲಿಶನಿವಾರ ಸಂಜೆ ಆಯೋಜಿಸಿದ್ದ ಸಾಹಸಿಗರ ಸಮಾವೇಶದಲ್ಲಿ ನಾನಾ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ನಾಡಿನ ಐವರು ಗಣ್ಯರಿಗೆ ಮುರುಘಾಶ್ರೀ ಹಾಗೂ ಭರಮಣ್ಣ ನಾಯಕ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
Vijaya Karnataka Web
ಕವಿ ಸಿದ್ದಲಿಂಗಯ್ಯ ಸೇರಿ ನಾಲ್ವರಿಗೆ ಮುರುಘಾಶ್ರೀ ಪ್ರಶಸ್ತಿ


ದಲಿತ ಕವಿ ಡಾ.ಸಿದ್ದಲಿಂಗಯ್ಯ, ಧಾರವಾಡದ ಶ್ರೀ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮಿಗಳು, ಅಹಿಂದ ಮುಖಂಡ ಮುರುಘ ರಾಜೇಂದ್ರ ಒಡೆಯರ್‌, ವಾಣಿಜ್ಯೋದ್ಯಮಿ ಜೆ.ಎಂ.ಜಯಕುಮಾರ್‌ರಿಗೆ ಮುರುಘಾಶ್ರೀ ಪ್ರಶಸ್ತಿ ಹಾಗೂ ಡ್ರೋನ್‌ ಖ್ಯಾತಿಯ ಯುವ ವಿಜ್ಞಾನಿ ಎನ್‌.ಎಂ.ಪ್ರತಾಪ್‌ ಅವರಿಗೆ ಭರಮಣ್ಣ ನಾಯಕ ಪ್ರಶಸ್ತಿಯನ್ನು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿ ತಲಾ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಉತ್ಸವ ಸಮಿತಿ ಗೌರವಾಧ್ಯಕ್ಷ ಕಾಗಿನೆಲೆ ಕನಕಗುರುಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ, ಗದಗ-ಡಂಬಳ ಶ್ರೀತೋಂಟದಾರ್ಯ ಮಠದ ಶ್ರೀ ಡಾ.ತೋಂಟದ ಸಿದ್ಧರಾಮಶ್ರೀಗಳು ಸಮ್ಮುಖ ವಹಿಸಿದ್ದರು. ಕಾರ್ಯಾಧ್ಯಕ್ಷ ಹನುಮಲಿ ಷಣ್ಮುಖಪ್ಪ, ಶಾಸಕರಾದ ಟಿ.ರಘುಮೂರ್ತಿ, ರಾಮಚಂದ್ರಪ್ಪ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ, ಪಟೇಲ್‌ ಶಿವಕುಮಾರ್‌ ಇದ್ದರು.

ಕೊಟ್‌..

ಬಸವತತ್ವಕ್ಕೆ ಈ ನಾಡನ್ನು ಎಲ್ಲಬಗೆಯ ಕೇಡು , ಆಪತ್ತು, ವಿಪತ್ತುಗಳಿಂದ ರಕ್ಷಿಸುವ ಸಾಮರ್ಥ್ಯ ಇದೆ.

-ಡಾ.ಸಿದ್ದಲಿಂಗಯ್ಯ, ಸಾಹಿತಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ