Please enable javascript.ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ - ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ - Vijay Karnataka

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ

ವಿಕ ಸುದ್ದಿಲೋಕ 27 Feb 2014, 2:00 am
Subscribe

ಕೊಪ್ಪಳ ಜಿಲ್ಲೆಯ ಕನಕಗಿರಿಯ ಜೀರ‌್ಹಾಳ ಗ್ರಾಮದ ವಾಲ್ಮೀಕಿ ವೃತ್ತದಲ್ಲಿನ ಮದಕರಿ ನಾಯಕ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಕೃತ್ಯವನ್ನು ವಿರೋಸಿ ಚಿತ್ರದುರ್ಗ ನಾಯಕ ಸಮಾಜದ ಮುಖಂಡರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ
ಚಿತ್ರದುರ್ಗ: ಕೊಪ್ಪಳ ಜಿಲ್ಲೆಯ ಕನಕಗಿರಿಯ ಜೀರ‌್ಹಾಳ ಗ್ರಾಮದ ವಾಲ್ಮೀಕಿ ವೃತ್ತದಲ್ಲಿನ ಮದಕರಿ ನಾಯಕ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಕೃತ್ಯವನ್ನು ವಿರೋಸಿ ಚಿತ್ರದುರ್ಗ ನಾಯಕ ಸಮಾಜದ ಮುಖಂಡರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ರಾಜಕೀಯ ಸ್ವಾರ್ಥ ಹಿತಾಸಕ್ತಿಗಳಿಗೆ ಆಯಾ ಸಮುದಾಯಗಳ ಸ್ವಾಭಿಮಾನ ಸಂಕೇತವಾದ ಚಾರಿತ್ರಿಕ ವ್ಯಕ್ತಿ, ಸಮುದಾಯದ ಲಾಂಛನಗಳಿಗೆ ಈ ರೀತಿ ಅಪಮಾನಗೊಳಿಸುವುದು ಅನಾಗರೀಕ ನಡವಳಿಕೆಯಾಗಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳು ಎಷ್ಟೇ ಪ್ರಭಾವಿಗಳಾದರೂ ಈ ಕೂಡಲೇ ಬಂಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷ ಬಿ.ಕಾಂತರಾಜ್, ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕೆ.ಪಿ.ಸಂಪತ್‌ಕುಮಾರ್, ಡಿ.ಗೋಪಾಲಸ್ವಾಮಿ ನಾಯಕ್, ಎಸ್.ಬೋರಯ್ಯ, ಕೆ.ಸಣ್ಣಪಾಲಯ್ಯ, ಮಾಯಣ್ಣ, ಬಾವಾಜಿ, ಬಿ.ಪಾಪನಾಯಕ ಮತ್ತಿತರರಿದ್ದರು.

ಸತ್ಯಮೇವ ಜಯತೇ ಯುವಶಕ್ತಿ ಸಂಘ: ಕೊಪ್ಪಳ ಜಿಲ್ಲೆಯ ಕನಕಗಿರಿಯ ಜೀರ‌್ಹಾಳ ಗ್ರಾಮದ ವಾಲ್ಮೀಕಿ ವೃತ್ತದಲ್ಲಿನ ಮದಕರಿ ನಾಯಕ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಕೃತ್ಯವನ್ನು ವಿರೋಸಿ ಸತ್ಯಮೇವ ಜಯತೇ ಯುವಶಕ್ತಿ ಸಂಘದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಓ.ಪ್ರತಾಪ್‌ಕುಮಾರ್, ಉಪಾಧ್ಯಕ್ಷ ಬಿ.ಎಂ.ಅಶೋಕ್, ನಿರಂಜನಮೂರ್ತಿ, ನಾಗರಾಜ್, ಶಿವಣ್ಣ, ಸುದರ್ಶನನಾಯಕ, ಸುದೀಂದ್ರ, ಶಿವಪ್ರಸಾದ್ ಮತ್ತಿತರರಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ