ಆ್ಯಪ್ನಗರ

 ಸಂಚಾರ ನಿಯಮ ಉಲ್ಲಂಘಟನೆ: 180 ದೂರು ದಾಖಲು

ಚಳ್ಳಕೆರೆ ಪೊಲೀಸ್‌ ವಿಭಾಗದಲ್ಲಿ ಸೋಮವಾರ ಸಂಚಾರಿ ನಿಮಯಗಳನ್ನು ಉಲ್ಲಂಘಿಸಿದ 180 ವಾಹನಗಳ ವಿರುದ್ಧ ಕೇಸುಗಳನ್ನು ದಾಖಲಿಸಿ ಅವರಿಂದ 40 ಸಾವಿರ ರೂ. ದಂಡ ವಸೂಲು ಮಾಡಲಾಗಿದೆ. ಇಂತಹ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಡಿವೈಎಸ್‌ಪಿ ಎಂ.ಶ್ರೀನಿವಾಸ್‌ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 29 Sep 2016, 8:02 am
ಚಳ್ಳಕೆರೆ : ಚಳ್ಳಕೆರೆ ಪೊಲೀಸ್‌ ವಿಭಾಗದಲ್ಲಿ ಸೋಮವಾರ ಸಂಚಾರಿ ನಿಮಯಗಳನ್ನು ಉಲ್ಲಂಘಿಸಿದ 180 ವಾಹನಗಳ ವಿರುದ್ಧ ಕೇಸುಗಳನ್ನು ದಾಖಲಿಸಿ ಅವರಿಂದ 40 ಸಾವಿರ ರೂ. ದಂಡ ವಸೂಲು ಮಾಡಲಾಗಿದೆ. ಇಂತಹ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಡಿವೈಎಸ್‌ಪಿ ಎಂ.ಶ್ರೀನಿವಾಸ್‌ ತಿಳಿಸಿದ್ದಾರೆ.
Vijaya Karnataka Web  180
 ಸಂಚಾರ ನಿಯಮ ಉಲ್ಲಂಘಟನೆ: 180 ದೂರು ದಾಖಲು


ನಗರದ ಪೊಲೀಸ್‌ ಉಪ ಅಧೀಕ್ಷ ಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಶಾಲೆ-ಕಾಲೇಜುಗಳ ಸಮೀಪ ಇಂತಹ ಚಟುವಟಿಕೆಗಳು ನಡೆಯುತ್ತಿದ್ದು, ಇವರ ವಿರುದ್ಧವೂ ಕ್ರಮಕೈಗೊಳ್ಳಲು ವಿಡಿಯೋ ಮಾಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುವುದು ಎಂದರು.

ಮಂಗಳವಾರ ನಡೆದ ದಾಳಿಯಲ್ಲಿ 41 ಗೃಹ ಬಳಿಕೆ ಗ್ಯಾಸ್‌ ಸಿಲೆಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೇ ಸೂರನಹಳ್ಳಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕ್ಯಾನ್‌ನ 396 ಲೀಟರ್‌ ಸೀಮೆಎಣ್ಣೆ ಜತೆಗೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಚಳ್ಳಕೆರೆ ,ತಳಕು,ಮೊಳಕಾಲ್ಮುರಿನಲ್ಲಿ ಮಟ್ಕಾ ಬರೆಯುತ್ತಿದ್ದ ಐದು ಜನರ ವಿರುದ್ಧ ಪ್ರಕರಣ ದಾಖಲಿಸಿ ಸಾವಿರಾರು ಹಣ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚಳ್ಳಕೆರೆ ಮತ್ತು ಮೊಳಕಾಲ್ಮುರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಏಳು ಲಾರಿ ಮತ್ತು ಎರಡು ಟ್ರ್ಯಾಕ್ಟರ್‌ಗಳಲ್ಲಿನ ಸಾವಿರಾರು ಬೆಲೆ ಬಾಳುವ ಮರಳನ್ನು ವಶಪಡಿಸಿಕೊಳ್ಳಲಾಗಿ¨ದೆ. ಕಾನೂನು ಬಾಹಿರ, ಅಕ್ರಮ ಮರಳು ಸಾಗಣೆ ತಡೆಯಲು ತಂಡವನ್ನು ರಚಿಸಲಾಗಿದೆ. ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕಾಲೇಜು ಬಳಿ ಪುಂಡ ಹುಡುಗರನ್ನು ನಿಯಂತ್ರಿಸಲು ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುವುದು. ಜತೆಗೆ ಸರಗಳ್ಳತನ ಬಗ್ಗೆ ಸುಳಿವು ಸಿಕ್ಕಿದೆ ಎಂದು ಅವರು ತಿಳಿಸಿದರು.

ಸಿಪಿಐ ಕೆ.ಸಮೀವುಲ್ಲ ಮಾತನಾಡಿ, ಜಿಲ್ಲೆಯ ಹಿರಿಯೂರು, ಚಿತ್ರದುರ್ಗದಲ್ಲಿ ಹೆಚ್ಚಿನ ಸರಗಳ್ಳತನ ನಡೆದಿವೆ. ಇಡೀ ಜಿಲ್ಲೆಯಲ್ಲಿ ಪಲ್ಸ್‌ರ್‌ ಬೈಕ್‌ನಲ್ಲಿ ಸುತ್ತು ಹಾಕುತ್ತಿದ್ದಾರೆ ಎಂಬ ಸುಳಿವಿದೆ. ಈ ಬಗ್ಗೆ ಕಾರ್ಯಚರಣೆ ನಡೆಸಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ