ಆ್ಯಪ್ನಗರ

3 ವರ್ಷ ಶಿಕ್ಷೆ, 5 ಸಾವಿರ ರೂ. ದಂಡ

ಹಿರಿಯೂರು ತಾಲೂಕು ಬುರುಜನರೊಪ್ಪ ಗ್ರಾಪಂ ಬಿಲ್‌ ಕಲೆಕ್ಟರ್‌ ವಸೂಲಿ ಮಾಡಿದ ತೆರಿಗೆ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಲಯ 3 ವರ್ಷ ಶಿಕ್ಷೆ, 5 ಸಾವಿರ ರೂ. ದಂಡವಿಧಿಸಿ ತೀರ್ಪು ನೀಡಿದೆ.

Vijaya Karnataka 1 May 2018, 7:39 pm
ಚಿತ್ರದುರ್ಗ: ಹಿರಿಯೂರು ತಾಲೂಕು ಬುರುಜನರೊಪ್ಪ ಗ್ರಾಪಂ ಬಿಲ್‌ ಕಲೆಕ್ಟರ್‌ ವಸೂಲಿ ಮಾಡಿದ ತೆರಿಗೆ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಲಯ 3 ವರ್ಷ ಶಿಕ್ಷೆ, 5 ಸಾವಿರ ರೂ. ದಂಡವಿಧಿಸಿ ತೀರ್ಪು ನೀಡಿದೆ.
Vijaya Karnataka Web Jail


ಬುರುಜನರ ರೊಪ್ಪ ಗ್ರಾಪಂನ ಬಿಲ್‌ ಕಲೆಕ್ಟರ್‌ ಮಹಾಂತೇಶ್‌ ಶಿಕ್ಷೆಗೆ ಗುರಿಯಾದವರು. ಗ್ರಾಪಂನಲ್ಲಿ 2003-04ನೇ ಸಾಲಿನಲ್ಲಿ ಆರೋಪಿ ಮಹಾಂತೇಶ್‌, ಕಾರ್ಯದರ್ಶಿ ಮಲ್ಲಾರಿರಾವ್‌, ಜಿಲಾನ್‌ ಪಾಷಾ ಎಂಬವರು ಕರಪಾವತಿ ಮೊತ್ತವನ್ನು ಪಂಚಾಯಿತಿ ಲೆಕ್ಕಕ್ಕೆ ಪೂರ್ಣ ಪ್ರಮಾಣದಲ್ಲಿ ಜಮಾ ಮಾಡದೇ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಲೋಕಾಯುಕ್ತರು ಲಂಚ ನಿರ್ಬಂಧ ಕಾಯ್ದೆಯಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ನಂತರ ಪ್ರಕರಣದ ಕುರಿತು ಲೋಕಾಯುಕ್ತ ತನಿಖಾಧಿಕಾರಿ ಅಂತಿಮ ವರದಿ ಸಲ್ಲಿಸಿದ್ದರು. ಮೊದಲನೇ ಆರೋಪಿ ಮಹಾಂತೇಶ್‌ ದಾಖಲೆ ತಿದಿ ಹಣ ದುರುಪಯೋಗ ಪಡಿಸಿಕೊಂಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ.ವಸ್ತ್ರಮಠ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐಪಿಸಿ ಕಲಂ ಅನ್ವಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ಮಹಾಂತೇಶ್‌, ಮಲ್ಲಾರಿ ರಾವ್‌, ಜಿಲಾನ್‌ ಬಾಷಾ ವಿರುದ್ಧ ಭ್ರಷ್ಟಾಚಾರ ನಿರ್ಬಂಧ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಆರೋಪದಿಂದ ಬಿಡುಗಡೆ ಮಾಡಲಾಗಿದೆ. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ.ಮಲ್ಲೇಶಪ್ಪ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ