ಆ್ಯಪ್ನಗರ

ಪ್ರತಿಷ್ಟಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರತಿಷ್ಟಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಕಾರ್ಯಕ್ರಮದನ್ವಯ 2019-20 ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 10 Apr 2019, 5:00 am
ಚಿತ್ರದುರ್ಗ : ಪ್ರತಿಷ್ಟಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಕಾರ್ಯಕ್ರಮದನ್ವಯ 2019-20 ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application invitation to admission to 6th standard class of prestigious schools
ಪ್ರತಿಷ್ಟಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಹಾಗೂ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ಮತ್ತು ಮೊಳಕಾಲ್ಮುರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಏಪ್ರಿಲ್‌ 9ರಿಂದ 22 ರೊಳಗೆ ಪಡೆದು, ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಭರ್ತಿ ಮಾಡಬೇಕು.

ಆಯಾ ತಾಲೂಕು ಕೇಂದ್ರ, ಜಿಲ್ಲಾ ಕೇಂದ್ರಗಳಿಗೆ ಕಚೇರಿ ವೇಳೆಯಲ್ಲಿ ಏ.24 ರೊಳಗೆ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ತಡವಾಗಿ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ.

ವಿದ್ಯಾರ್ಥಿಯ ಕುಟುಂಬದ ಆದಾಯ ಎರಡು ಲಕ್ಷ ಮೀರಿರಬಾರದು. 5 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ನಡೆಸಲಾಗುವುದು. 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಗಳಿಸಿರಬೇಕು. ಬಾಲಕಿಯರಿಗೆ ಶೇ.50 ಮೀಸಲಾತಿ ಇದೆ. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಶೇ.50ರಷ್ಟು ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲು ಇದೆ. ನಿಗದಿತ ಅರ್ಜಿ ಜತೆಗೆ 2 ಪಾಸ್‌ಪೋರ್ಟ್‌ ಸೈಜ್‌ ಭಾವಚಿತ್ರ, 5ನೇ ತರಗತಿ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣಪತ್ರ, ಆಧಾರ್‌ಕಾರ್ಡ್‌, ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ