ಆ್ಯಪ್ನಗರ

ಗುತ್ತಿಗೆದಾರರ ಮೇಲಿನ ಐಟಿ ದಾಳಿಗೂ ಬಿಎಸ್‌ವೈಗೂ ಯಾವುದೇ ಸಂಬಂಧ ಇಲ್ಲ: ಬಿವೈ ವಿಜಯೇಂದ್ರ

ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ ಅವರು, ಐ.ಟಿ. ದಾಳಿ ನಡೆಯುತ್ತಿರುವ ಕುರಿತು, ಬಿ.ಎಸ್‌.ವೈ. ಅವರನ್ನು ಮತ್ತೆ ಜೈಲಿಗೆ ಕಳಿಸೋ ಹುನ್ನಾರವೆಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು. ಇದೇ ವೇಳೆ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ದೇಶ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರದ ಪರವಾಗಿ ಉಪ ಚುನಾವಣೆಯಲ್ಲಿ ಮತದಾರರು ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.

Vijaya Karnataka 16 Oct 2021, 8:58 am
ಚಿತ್ರದುರ್ಗ: ಗುತ್ತಿಗೆದಾರರ ಮೇಲೆ ನಡೆದ ಐಟಿ ದಾಳಿಗೂ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಬಿ.ಎಸ್‌.ವೈ.ಗೂ ಸಂಬಂಧವಿಲ್ಲ ಎಂದು ಬಿಎಸ್‌ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
Vijaya Karnataka Web By Vijayendra & BSY


ಚಿತ್ರದುರ್ಗ ನಗರದ ಮುರುಘಾ ಮಠದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ ಅವರು, ಐ.ಟಿ. ದಾಳಿ ನಡೆಯುತ್ತಿರುವ ಕುರಿತು, ಬಿ.ಎಸ್‌.ವೈ. ಅವರನ್ನು ಮತ್ತೆ ಜೈಲಿಗೆ ಕಳಿಸೋ ಹುನ್ನಾರವೆಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು. ಇದೇ ವೇಳೆ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ದೇಶ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರದ ಪರವಾಗಿ ಉಪ ಚುನಾವಣೆಯಲ್ಲಿ ಮತದಾರರು ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.
ವಿಜಯೇಂದ್ರ 'ಸೈಡ್‌ಲೈನ್‌'ಗೆ ಕಾರ್ಯತಂತ್ರ? ಕಮಲದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಸೂಚಿಸುತ್ತೆ?
ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದ ವಿಜಯೇಂದ್ರ, ದೇಶದ ಕೆಲ ರಾಜ್ಯಗಳಲ್ಲಿ ಮಾತ್ರ ಅವಶೇಷದ ರೂಪದಲ್ಲಿ ಉಳಿದಿದೆ. ಕಾಂಗ್ರೆಸ್‌ ಏನೇ ಬೊಬ್ಬೆ ಹೊಡೆದರೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ನಾನು ಕೂಡ ವಿಜಯ ದಶಮಿ ಬಳಿಕ ಹಾನಗಲ್‌, ಸಿಂದಗಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ರಾಜ್ಯ ಸುತ್ತಿ ಅಭಿವೃದ್ಧಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದ ಅವರು, ಬಸವರಾಜ ಬೊಮ್ಮಾಯಿ ಅವರ ಕಾರ್ಯ ವೈಖರಿಯನ್ನ ರಾಜ್ಯದ ಜನತೆ ನೋಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷ ತಿರುಕನ ಕನಸು ಕಾಣುತ್ತಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಮತದಾರರು ಬಿಜೆಪಿ ಪರವಾಗಿ ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂಬ ಎಚ್‌.ಡಿ.ಕೆ. ಹೇಳಿಕೆಗೆ ಯಾವುದೇ ಅರ್ಥವಿಲ್ಲ, ಅದು ರಾಜಕೀಯ ಪ್ರೇರಿತ, ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದರು.

ಕೆಪಿಸಿಸಿಯ ವೀಕ್ಷಕರಾಗಿ ಟಿ.ಎಂ. ಶಹೀದ್‌ ತೆಕ್ಕಿಲ್‌ ಆಯ್ಕೆ
ಹಾವೇರಿ ಜಿಲ್ಲೆ ಹಾನಗಲ್‌ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಪರವಾಗಿ ಕೆಪಿಸಿಸಿಯ ವೀಕ್ಷಕರಾಗಿ ಕಾಂಗ್ರೆಸ್‌ ಮುಖಂಡ ಟಿ.ಎಂ. ಶಹೀದ್‌ ತೆಕ್ಕಿಲ್‌ ಅವರನ್ನು ಕೆಪಿಸಿಸಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇಮಕಗೊಳಿಸಿದ್ದಾರೆ.
ಐಎಂಎ ಹಗರಣದಲ್ಲಿ ಜಮೀರ್‌ನ ರಕ್ಷಿಸುವಂತೆ ಸಿದ್ದರಾಮಯ್ಯ ನನ್ನ ಬಳಿ ಕಳಿಸಿದ್ದರು; ಎಚ್‌ಡಿಕೆ ಗಂಭೀರ ಆರೋಪ
ಟಿ.ಎಂ.ಶಹೀದ್‌ ತೆಕ್ಕಿಲ್‌ ಸುಳ್ಯ ತಾಲೂಕು ಪ್ರಧಾನ ಕಾರ‍್ಯದರ್ಶಿಯಾಗಿ ಜಿಲ್ಲಾ ಪ್ರಧಾನ ಕಾರ‍್ಯದರ್ಶಿಯಾಗಿ, ರಾಜ್ಯ ಕಾರ‍್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಸಂಘಟನಾ ಕಾರ‍್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ‍್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ‍್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ‍್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ‍್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕ್ಕೆರೂರು ವಿಧಾನಸಭೆ ಕ್ಷೇತ್ರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಕೆಪಿಸಿಸಿಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್‌ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್‌ ಯೂತ್‌ ಫೌಂಡೇಶನ್‌ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅರಂತೋಡು ತೆಕ್ಕಿಲ್‌ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ