ಆ್ಯಪ್ನಗರ

ಚಿತ್ರದುರ್ಗ: ಡಿವೈಡರ್‌, ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ದುರ್ಮರಣ

ಹಿರಿಯೂರು ತಾಲೂಕಿನ ಮೇಟಿಕುರ್ಕೆಯ ಆತಿಥ್ಯ ಹೋಟೆಲ್ ಬಳಿ ಇನ್ನೋವಾ ಕಾರು ಡಿವೈಡರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಜನ ಮೃತಪಟ್ಟಿದ್ದಾರೆ.

Vijaya Karnataka Web 1 May 2019, 7:41 pm
ಚಿತ್ರದುರ್ಗ: ಇನ್ನೋವಾ ಕಾರು ರಸ್ತೆ ವಿಭಜಕ ಮತ್ತು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
Vijaya Karnataka Web ಅಪಘಾತ
ಅಪಘಾತ


ಹಿರಿಯೂರು ತಾಲೂಕಿನ ಮೇಟಿಕುರ್ಕೆಯ ಆತಿಥ್ಯ ಹೋಟೆಲ್ ಬಳಿ ಇನ್ನೋವಾ ಕಾರು ಡಿವೈಡರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಜನ ಮೃತಪಟ್ಟಿದ್ದಾರೆ.

ಮೃತರು ಆಂಧ್ರ ಮತ್ತು ಬೆಂಗಳೂರು ಮೂಲದವರು. ಪ್ರಸ್ತುತ ಬೆಂಗಳೂರು ಜೆಪಿ ನಗರದಲ್ಲಿ ವಾಸಿಸುತ್ತಿದ್ದರೆನ್ನಲಾಗಿದೆ. ಭದ್ರಾವತಿಯಿಂದ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ತಾಯಮ್ಮ (50), ಸುಶ್ಮಿತಾ (13), ಲತಾ (26), ವರ್ಣಿತಾ (9), ಜಾಹ್ನವಿ (3) ಮೃತರು.

ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿಯಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಸಂಜೆ 5.45 ರ ಸಮಯದಲ್ಲಿ ಆತಿಥ್ಯ ಹೋಟೆಲ್ ಸಮೀಪ ಟೈರ್ ಸಿಡಿದು ನಿಯಂತ್ರಣ ತಪ್ಪಿತು. ಇನ್ನೋವಾ ಕಾರು ಮೊದಲು ಡಿವೈಡರ್, ನಂತರ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಎಸ್ಪಿ ಡಾ.ಕೆ.ಅರುಣ್ ಹಾಗೂ ಸ್ಥಳೀಯ ಪೊಲೀಸ್ ಅಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ