ಆ್ಯಪ್ನಗರ

ಹಿರೇಕೆರೂರಿನಲ್ಲಿ ಬಿಜೆಪಿ ಅಬ್ಬರ ; ಬಿಸಿ ಪಾಟೀಲ್ ಪರವಾಗಿ ಸಿಎಂ ರೋಡ್ ಶೋ

ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ಪರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ರೋಡ್ ಶೋ ನಡೆಸಿದರು. ಬಿಎಸ್‌ವೈಗೆ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ಸಾಥ್ ನೀಡಿದ್ರು.

Vijaya Karnataka Web 28 Nov 2019, 6:22 pm
ಚಿತ್ರದುರ್ಗ: ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ಪರವಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಭರ್ಜರಿ ರೋಡ್ ಶೋ ನಡೆಸಿದರು. ಗುರುವಾರ ರೋಡ್ ಶೋ ನಡೆಸಿದ ಸಿಎಂ ಹಾಗೂ ಬಿಜೆಪಿ ಮುಖಂಡರು ಬಿಸಿ ಪಾಟೀಲ್ ಪರವಾಗಿ ಮತಯಾಚನೆ ಮಾಡಿದರು.
Vijaya Karnataka Web chief minister bs yeddyurappa road show for bc patil
ಹಿರೇಕೆರೂರಿನಲ್ಲಿ ಬಿಜೆಪಿ ಅಬ್ಬರ ; ಬಿಸಿ ಪಾಟೀಲ್ ಪರವಾಗಿ ಸಿಎಂ ರೋಡ್ ಶೋ


ಕ್ಷೇತ್ರ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಿಎಸ್‌ವೈಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪುತ್ರ ಬಿವೈ ರಾಘವೇಂದ್ರ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು. ಇದಕ್ಕೂ ಮುನ್ನ ಬೃಹತ್ ಚುನಾವಣಾ ಸಮಾವೇಶದಲ್ಲಿ ಸಿಎಂ ಬಿಎಸ್‌ವೈ ಭಾಗಿಯಾಗಿ ಅಭ್ಯರ್ಥಿ ಬಿಸಿ ಪಾಟೀಲ್ ಪರವಾಗಿ ಮತಯಾಚನೆ ಮಾಡಿದರು.

ಪಕ್ಷವಿರೋಧಿ ಚಟುವಟಿಕೆಯಿಂದ ಅನರ್ಹರಾಗಿ ಬಿಜೆಪಿ ಸೇರ್ಪಡೆಗೊಂಡಿರುವ ಬಿ.ಸಿ ಪಾಟೀಲ್ ಹಿರೇಕೆರೂರು ಕ್ಷೇತ್ರದಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಸಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್ ಪರವಾಗಿ ಬುಧವಾರ ರೋಡ್ ಶೋ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಸಿದ್ದರಾಮಯ್ಯ ಬಿಸಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

‘ಕುಮಾರಸ್ವಾಮಿಯದ್ದು ವಿಕ್ಸ್ ಕಣ್ಣೀರು’ ಸದಾನಂದ ಗೌಡ ವ್ಯಂಗ್ಯ

ಚಿಕ್ಕಬಳ್ಳಾಪುರದಲ್ಲಿ ಡಿಕೆಶಿ ರೋಡ್ ಶೋ

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ ಪರವಾಗಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಸಿದ ಡಿಕೆಶಿ ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಹರಿಯಾಯ್ದರು.

ಅನರ್ಹ ನಾರಾಯಣಗೌಡರಿಗೆ ನಿದ್ರೆ ಬರ್ತಿಲ್ವಂತೆ..! ಕೊಡಬಾರದ ಕಷ್ಟ ಕೊಟ್ರೂ ಎದ್ದು ಬಂದೆ ಅಂದ್ರು ಡಿಕೆಶಿ!

ಬಡವರಿಗೆ ಅಕ್ಕಿ ಹಂಚಿ ಅಕ್ಕಿ ಆಂಜಿನಪ್ಪ ಎಂದೇ ಹೆಸರು ಪಡೆದಿರುವ ನಮ್ಮ ಅಭ್ಯರ್ಥಿಗೆ ನಿಮ್ಮ ಆಶೀರ್ವಾದ ಬೇಕು. ನಿಮ್ಮ ಸೇವೆ ಮಾಡಲು ಈತನಿಗೆ ಒಂದು ಅವಕಾಶ ಮಾಡಿಕೊಡಿ. ನಿಮ್ಮ ಮತ, ಸ್ವಾಭಿಮಾನವನ್ನು ಮಾರಿದವನಿಗೆ ತಕ್ಕ ಪಾಠ ಕಲಿಸಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಮತದಾರರಿಗೆ ಕರೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ